ಬ್ರೇಕಿಂಗ್ ನ್ಯೂಸ್
27-02-25 05:48 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.27: ಒಣಹುಲ್ಲು ಸುಟ್ಟರೆ ಹೊಸ ಚಿಗುರು ಬರುತ್ತದೆ. ತನ್ನ ಮೇಕೆಗಳಿಗೆ ಮೇವು ಸಿಗುತ್ತದೆಂಬ ದುರಾಲೋಚನೆಯಿಂದ ವ್ಯಕ್ತಿಯೊಬ್ಬ ಅರಣ್ಯ ಪ್ರದೇಶದ ಒಣ ಹುಲ್ಲಿಗೆ ಬೆಂಕಿ ಇಟ್ಟ ಪರಿಣಾಮ ಸುಮಾರು 10 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಗ್ರಾಮಾಂತರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ.
ರಾಜಪ್ಪ (42) ಎಂಬಾತ ತನ್ನ ಮೇಕೆಗಳನ್ನು ಮೇಯಿಸಲು ಸಂಗಮ ವನ್ಯಜೀವಿ ವಲಯದ ಅರಣ್ಯ ಪ್ರದೇಶಕ್ಕೆ ತೆರಳುತ್ತಿದ್ದ. ಅರಣ್ಯದಲ್ಲಿ ಹುಲ್ಲು ಒಣಗಿದ್ದನ್ನು ನೋಡಿದ ಆತ, ಇದನ್ನು ಸುಟ್ಟರೆ ಬೇಗನೆ ಹೊಸ ಹುಲ್ಲು ಚಿಗುರುತ್ತದೆ, ಆಗ ಕುರಿ-ಮೇಕೆಗಳಿಗೆ ಮೇವು ಲಭ್ಯವಾಗುತ್ತದೆ ಎಂದು ಅದಕ್ಕೆ ಬೆಂಕಿ ಹಚ್ಚಿದ್ದಾನೆ. ಇದರಿಂದ ಹುಲ್ಲು ಹೊತ್ತಿಕೊಂಡು 10 ಎಕರೆ ಅರಣ್ಯ ಪ್ರದೇಶ ನಾಶವಾಗಿದೆ.
ಅಗ್ನಿ ಅವಘಡ ಸುದ್ದಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅದಾಗಲೇ 10 ಎಕರೆ ಅರಣ್ಯ ಭಸ್ಮವಾಗಿತ್ತು. ಈ ಅವಘಡದಲ್ಲಿ ಕೆಲವು ವನ್ಯಜೀವಿಗಳು ಸಹ ಸಾವನ್ನಪ್ಪಿರುವ ಬಗ್ಗೆ ಶಂಕಿಸಲಾಗಿದೆ.
ಘಟನೆ ನಡೆದ ಸ್ಥಳದಲ್ಲೇ ರಾಜಪ್ಪ ಅವರನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಆತ ತಾನೇ ಬೆಂಕಿ ಹಚ್ಚಿದ್ದಾಗಿ ಒಪ್ಪಿಕೊಂಡಿದ್ದಾನೆಂದು ತಿಳಿದುಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
A misguided attempt to create fresh grass for grazing led to a devastating forest fire in the Sangama Wildlife Sanctuary, Doddalahalli, Kanakapura taluk. A man set dry grass on fire, believing it would promote new growth, but ended up destroying 10 acres of forest land.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm