ಬ್ರೇಕಿಂಗ್ ನ್ಯೂಸ್
28-02-25 11:51 am HK News Desk ಕರ್ನಾಟಕ
ಹಾಸನ, ಫೆ.28 : ನಿಧಾನಗತಿಯ ಕಾಮಗಾರಿಯಿಂದ ಜನರ ಆಕ್ರೋಶಕ್ಕೆ ತುತ್ತಾಗಿರುವ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಟಾಸ್ಕ್ ನೀಡಲಾಗಿದೆ. ಇದಕ್ಕಾಗಿ ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕು ಎಂಬ ಪ್ರಸ್ತಾವನೆಯನ್ನು ಹಾಸನ ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.
ಸಂಸದ ಶ್ರೇಯಸ್ ಪಟೇಲ್ ಸಕಲೇಶಪುರದಲ್ಲಿ ಕಾಮಗಾರಿ ವೀಕ್ಷಣೆ ಮಾಡಿದ ವೇಳೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಈ ವೇಳೆ, ಘಾಟ್ ಹೆದ್ದಾರಿಯಲ್ಲಿ ಕನಿಷ್ಠ ಒಂದು ತಿಂಗಳು ವಾಹನ ಸಂಚಾರ ನಿರ್ಬಂಧಿಸುವಂತೆ ಜಿಲ್ಲಾಡಳಿತವನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೋರಿದ್ದಾರೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ.

ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಒಂದು ಭಾಗಕ್ಕೆ ಕಾಂಕ್ರೀಟ್ ಹಾಕಿ, ಕ್ಯೂರಿಂಗ್ ಆಗಲು 25 ದಿನಗಳು ಬೇಕಾಗುತ್ತದೆ. ಹಾಗಾಗಿ ಈ ವೇಳೆ ವಾಹನ ಸಂಚಾರದಿಂದ ಸಮಸ್ಯೆಯಾಗುವುದರಿಂದ ಸಂಚಾರ ನಿಷೇಧ ಮಾಡಿದರೆ ಉತ್ತಮ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಸಂಸದರಿಗೆ ತಿಳಿಸಿದರು.
ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಗುರುತಿಸಿ, ವಾಹನ ಸಂಚಾರ ನಿಷೇಧಿಸುವ ದಿನಾಂಕ ನಿಗದಿ ಪಡಿಸಲಾಗುವುದು ಎಂದು ವಿಭಾಗಾಧಿಕಾರಿ ತಿಳಿಸಿದ್ದಾರೆ.
ಸಕಲೇಶಪುರದ ದೋಣಿಗಲ್ ಕ್ರಾಸ್ನಿಂದ ಮಾರನಹಳ್ಳಿ ವರೆಗೆ 10 ಕಿ.ಮೀ. ಚತುಷ್ಪಥ ಕಾಂಕ್ರೀಟ್ ರಸ್ತೆಯಲ್ಲಿ ಈ ವರೆಗೆ 4.8 ಕಿ.ಮೀ. ರಸ್ತೆ ನಿರ್ಮಾಣ ಮಾತ್ರ ಆಗಿದೆ. ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿದ್ದಾರೆ.
The National Highways Authority of India (NHAI) has proposed suspending vehicular movement on Shiradi Ghat for at least a month to expedite the four-lane highway construction on the Bengaluru-Mangaluru National Highway-75.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm