ಬ್ರೇಕಿಂಗ್ ನ್ಯೂಸ್
28-02-25 11:51 am HK News Desk ಕರ್ನಾಟಕ
ಹಾಸನ, ಫೆ.28 : ನಿಧಾನಗತಿಯ ಕಾಮಗಾರಿಯಿಂದ ಜನರ ಆಕ್ರೋಶಕ್ಕೆ ತುತ್ತಾಗಿರುವ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ಕಾಮಗಾರಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಟಾಸ್ಕ್ ನೀಡಲಾಗಿದೆ. ಇದಕ್ಕಾಗಿ ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಬೇಕು ಎಂಬ ಪ್ರಸ್ತಾವನೆಯನ್ನು ಹಾಸನ ಜಿಲ್ಲಾಡಳಿತಕ್ಕೆ ಸಲ್ಲಿಸಿದೆ.
ಸಂಸದ ಶ್ರೇಯಸ್ ಪಟೇಲ್ ಸಕಲೇಶಪುರದಲ್ಲಿ ಕಾಮಗಾರಿ ವೀಕ್ಷಣೆ ಮಾಡಿದ ವೇಳೆ ಕಾಮಗಾರಿ ತ್ವರಿತ ಪೂರ್ಣಗೊಳಿಸಲು ಸೂಚಿಸಿದ್ದಾರೆ. ಈ ವೇಳೆ, ಘಾಟ್ ಹೆದ್ದಾರಿಯಲ್ಲಿ ಕನಿಷ್ಠ ಒಂದು ತಿಂಗಳು ವಾಹನ ಸಂಚಾರ ನಿರ್ಬಂಧಿಸುವಂತೆ ಜಿಲ್ಲಾಡಳಿತವನ್ನು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕೋರಿದ್ದಾರೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ.

ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಒಂದು ಭಾಗಕ್ಕೆ ಕಾಂಕ್ರೀಟ್ ಹಾಕಿ, ಕ್ಯೂರಿಂಗ್ ಆಗಲು 25 ದಿನಗಳು ಬೇಕಾಗುತ್ತದೆ. ಹಾಗಾಗಿ ಈ ವೇಳೆ ವಾಹನ ಸಂಚಾರದಿಂದ ಸಮಸ್ಯೆಯಾಗುವುದರಿಂದ ಸಂಚಾರ ನಿಷೇಧ ಮಾಡಿದರೆ ಉತ್ತಮ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಸಂಸದರಿಗೆ ತಿಳಿಸಿದರು.
ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಗುರುತಿಸಿ, ವಾಹನ ಸಂಚಾರ ನಿಷೇಧಿಸುವ ದಿನಾಂಕ ನಿಗದಿ ಪಡಿಸಲಾಗುವುದು ಎಂದು ವಿಭಾಗಾಧಿಕಾರಿ ತಿಳಿಸಿದ್ದಾರೆ.
ಸಕಲೇಶಪುರದ ದೋಣಿಗಲ್ ಕ್ರಾಸ್ನಿಂದ ಮಾರನಹಳ್ಳಿ ವರೆಗೆ 10 ಕಿ.ಮೀ. ಚತುಷ್ಪಥ ಕಾಂಕ್ರೀಟ್ ರಸ್ತೆಯಲ್ಲಿ ಈ ವರೆಗೆ 4.8 ಕಿ.ಮೀ. ರಸ್ತೆ ನಿರ್ಮಾಣ ಮಾತ್ರ ಆಗಿದೆ. ಭೂ ಕುಸಿತವಾಗುವ ಸಂಭಾವ್ಯ ಸ್ಥಳದಲ್ಲಿ ರಸ್ತೆ ಜತೆ ತಡೆಗೋಡೆ ನಿರ್ಮಿಸಲಾಗುವುದು ಎಂದು ಎನ್ಎಚ್ಎಐ ಅಧಿಕಾರಿಗಳು ತಿಳಿದ್ದಾರೆ.
The National Highways Authority of India (NHAI) has proposed suspending vehicular movement on Shiradi Ghat for at least a month to expedite the four-lane highway construction on the Bengaluru-Mangaluru National Highway-75.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm