ಬ್ರೇಕಿಂಗ್ ನ್ಯೂಸ್
28-02-25 05:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.28 : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿದೇಶಿ ವ್ಯಕ್ತಿಯೊಬ್ಬ ಭದ್ರತೆಗೆ ನಿಯೋಜಿಸಲ್ಪಟ್ಟ ಸಿಐಎಸ್ಎಫ್ ಸಿಬ್ಬಂದಿಗೆ ಹಲ್ಲೆಗೈದು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ನಡೆದಿದ್ದು, ಎಫ್ಐಆರ್ ದಾಖಲಾಗಿದೆ.
ಆಸ್ಟ್ರೇಲಿಯನ್ ಮತ್ತು ಯುಕೆ ಪಾಸ್ಪೋರ್ಟ್ಗಳನ್ನು ಹೊಂದಿರುವ ಫಾಯಿಲ್ಸ್ ಎಲಿಯಟ್ ಬ್ಲೇರ್ ಎಂಬ ವಿದೇಶಿ ವ್ಯಕ್ತಿ ಭದ್ರತಾ ಸಿಬ್ಬಂದಿ, ಇನ್ನೊಬ್ಬ ಮಹಿಳೆ ಸೇರಿ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಿದ್ದಾನೆ. ಘಟನೆ ಬೆನ್ನಲ್ಲೇ ವಿದೇಶಿಗನನ್ನು ವಶಕ್ಕೆ ಪಡೆದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಬುಧವಾರ ರಾತ್ರಿ 10.20ಕ್ಕೆ ನಿರ್ಗಮನ ವಲಯದಲ್ಲಿ ಭದ್ರತಾ ತಪಾಸಣೆ ನಡೆಯುತ್ತಿತ್ತು. ಸರತಿ ಸಾಲಿನಲ್ಲಿ ಬಂದಿದ್ದ ಬ್ಲೇರ್ ಅವರ ಬ್ಯಾಗ್ ಗಳನ್ನೂ ಸಿಐಎಸ್ಎಫ್ ಸಿಬ್ಬಂದಿ ತಪಾಸಣೆ ನಡೆಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಇದ್ದಕ್ಕಿದ್ದಂತೆ ಸಿಬ್ಬಂದಿಗಳ ಮೇಲೆ ವ್ಯಕ್ತಿ ಹೌಹಾರಿದ್ದಾನೆ. ಸಿಐಎಸ್ಎಫ್ ಕಾನ್ಸ್ಟೇಬಲ್ ರಾಮ್ಕುಮಾರ್ ದಲೇರಾ ಅವರನ್ನು ನಿಂದಿಸಿದ್ದಾನೆ. ಆತನನ್ನು ಸಮಾಧಾನಪಡಿಸಲು ಯತ್ನಿಸಿದ ಇತರೇ ಸಿಬ್ಬಂದಿಗಳನ್ನೂ ನಿಂದಿಸಿದ್ದಾನೆ. ಪ್ರಶ್ನೆ ಮಾಡಿದ್ದಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮಹಿಳೆ ಹಾಗೂ ಇತರ ಪ್ರಯಾಣಿಕರ ಮೇಲೂ ಹಲ್ಲೆ ನಡೆಸಲು ಮುಂದಾಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಬಳಿಕ ಸಿಐಎಸ್ಎಫ್ ಸಬ್ ಇನ್ಸ್ಪೆಕ್ಟರ್ ಅರವಿಂದ್ ಕುಮಾರ್ ಮಿಶ್ರಾ ವಿದೇಶಿ ವ್ಯಕ್ತಿಯ ವಿರುದ್ದ ವಿಮಾನ ನಿಲ್ದಾಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆತನ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿದೆ. ವಿಮಾನ ಯಾನಕ್ಕೂ ಅವಕಾಶ ನೀಡಲಾಗಿಲ್ಲ ಎಂದು ಅರವಿಂದ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
Foreigner Assaults CISF Personnel and Female Passenger at Kempegowda Airport.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm