ಬ್ರೇಕಿಂಗ್ ನ್ಯೂಸ್
28-02-25 06:17 pm HK News Desk ಕರ್ನಾಟಕ
ಹಾಸನ, ಫೆ.28: ಯಾರು ಏನು ಹೇಳಿದ್ದಾರೆ ನನಗಂತು ಗೊತ್ತಿಲ್ಲ. ರಾಜ್ಯದ ಆಡಳಿತ ಪಕ್ಷದಲ್ಲಿ ದಿನೇ ದಿನೇ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು, ತಾವು ಮುಖ್ಯಮಂತ್ರಿ ಆಗಬೇಕು ಅಂತ ಅನೇಕರು ಕಾಯ್ತಾ ಇದ್ದಾರೆ. ಇದನ್ನು ನೋಡಿದರೆ ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ಆಗೋ ತರಾ ಇದೆ. ಆ ಮುನ್ಸೂಚನೆಗಳನ್ನು ನೀವು ನೋಡುತ್ತಿದ್ದೀರಿ. ಹೀಗೆಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಡಿಕೆಶಿ ಯಾವ ಅರ್ಥದಲ್ಲಿ ಹೇಳಿದ್ದಾರೋ ಅವರನ್ನು ಪ್ರಶ್ನೆ ಮಾಡಿ. ಸರ್ಕಾರ ಎಲ್ಲಿದೆ, ಕಾಂಗ್ರೆಸ್ ಒಂದು ರೀತಿ ತಾಲಿಬಾನ್ ಸರ್ಕಾರ ಮಾಡ್ತಿದೆ. ಹಿಂದೂತ್ವಕ್ಕೆ, ಹಿಂದೂಗಳಿಗೂ ಗೌರವವಿಲ್ಲ. ಈ ರೀತಿಯ ಪರಿಸ್ಥಿತಿ ಹಿಂದೆಂದೂ ನಿರ್ಮಾಣ ಆಗಿಲ್ಲ. ಪ್ರಯಾಗ್ರಾಜ್ನಲ್ಲಿ ಕುಂಭಮೇಳಕ್ಕೆ ಕಾಂಗ್ರೆಸ್ನವರು ತಕರಾರು ಎತ್ತಿದ್ರು. ಇದರ ಮಧ್ಯೆ ಡಿ.ಕೆ.ಶಿವಕುಮಾರ್ ಕುಟುಂಬ ಸಮೇತ ಕುಂಭಮೇಳಕ್ಕೆ ಹೋಗಿ ಬಂದಿದ್ದಾರೆ. ನಮ್ಮ ಪ್ರಾಚೀನತೆ ಆಧಾರದ ಮೇಲೆ ಹೋಗಿ ಬಂದಿದ್ದಾರೆ. ಬಿಜೆಪಿಗೂ ಆ ಬೆಳವಣಿಗೆಗೂ ಯಾವುದೇ ಸಂಬಂಧವಿಲ್ಲ.
ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವರ ಜೊತೆ ಅವರು ಭಾಗವಹಿಸಿದ್ರು. ಇದರಿಂದ ನಾನಾ ರೀತಿಯ ಚರ್ಚೆಗಳು ನಡೆಯುತ್ತಿವೆ. ಶಿವರಾತ್ರಿ ಸಂದರ್ಭದಲ್ಲಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಅದಕ್ಕೂ ರಾಜಕೀಯ ಧ್ರುವೀಕರಣದ ಕತೆ ಕಟ್ಟಿದಾರೆ. ಡಿ.ಕೆ.ಶಿವಕುಮಾರ್ ಬಿಜೆಪಿಗೆ ಬಂದು ಬಿಡ್ತಾರೆ ಈ ರೀತಿಯ ಗುಸು, ಗುಸು ಶುರುವಾಗಿದೆ. ಇದರಲ್ಲಿ ಯಾವುದರಲ್ಲಿ ಅರ್ಥವಿಲ್ಲ.
ನಾವು ಮುಖ್ಯಮಂತ್ರಿಗಳಿಗೆ ಬಹಿರಂಗವಾಗಿ ಪತ್ರ ಬರೆದಿದ್ದೇವೆ. ನಾಡಿನ ಜನರ ಅಪೇಕ್ಷೆಗೆ ತಕ್ಕಂತೆ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಬೇಕು. ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿರುವ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಹಾಗಾಗಿ ಜನರ ಅಪೇಕ್ಷೆನೂ ಕೂಡ ಸಾಕಷ್ಟಿದೆ. ಗ್ಯಾರೆಂಟಿಗಳೇ ಅಭಿವೃದ್ಧಿ ಆಗಿಬಿಟ್ಟರೆ ಶಾಸಕರುಗಳು ತಲೆ ಎತ್ತಿಕೊಂಡು ಓಡಾಡಲು ಸಾಧ್ಯವಿಲ್ಲ. ಜನರು ಕೂಡ ನಮ್ಮನ್ನು ಕ್ಷಮಿಸುವುದಿಲ್ಲ. ಇದನ್ನು ಅರ್ಥ ಮಾಡಿಕೊಂಡು ಮುಖ್ಯಮಂತ್ರಿಗಳು ಕ್ಷೇತ್ರಗಳಿಗೆ ಅನುದಾನ ನೀಡ್ತಾರೆಂಬ ವಿಶ್ವಾಸ ಇದೆ.
ಮೊದಲ ಬಾರಿ ಗೆದ್ದ ಶಾಸಕರಿಗೆ ಈವರೆಗೂ ಅನುದಾನ ನೀಡಿಲ್ಲ. ಇದರ ಬಗ್ಗೆಯೂ ಗಮನ ಹರಿಸಬೇಕಾಗಿದೆ. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡನೆ ಮಾಡ್ತಾರೆ ಎಂಬ ಆಶಾಭಾವನೆಯಲ್ಲಿ ನಾವು ಕೂಡ ಇದ್ದೇವೆ ಎಂದು ಹೇಳಿದರು.
B Y Vijayendra Reacts to DK's Strategic Maneuver, Insights into Rapid Political Developments in the State
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
23-02-26 04:45 pm
HK News Desk
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 04:30 pm
Mangalore Correspondent
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm