ಬ್ರೇಕಿಂಗ್ ನ್ಯೂಸ್
02-03-25 02:10 pm HK News Desk ಕರ್ನಾಟಕ
ಬಳ್ಳಾರಿ, ಮಾ.2 : ಬಳ್ಳಾರಿ ಜಿಲ್ಲೆಯಾದ್ಯಂತ ಹಕ್ಕಿಜ್ವರ ಹಾವಳಿ ಕಾಣಿಸಿಕೊಂಡಿದ್ದು ಒಂದೇ ಫಾರಂನಲ್ಲಿ 8,000 ಕೋಳಿಗಳು ಸಾವನ್ನಪ್ಪಿದೆ. ನಿನ್ನೆ ಸಂಡೂರಲ್ಲಿ 2400 ಕೋಳಿಗಳ ಮಾರಣ ಹೋಮ ನಡೆದಿತ್ತು. ರಾಜ್ಯದಲ್ಲೇ ಅತಿ ಹೆಚ್ಚು ಕೋಳಿ ಫಾರಂ ಬಳ್ಳಾರಿ ಜಿಲ್ಲೆಯಲ್ಲಿದ್ದು ಜ್ವರದ ಹಾವಳಿಯಿಂದಾಗಿ ಕುಕ್ಕುಟ ಉದ್ಯಮಕ್ಕೆ ಭಾರೀ ಪೆಟ್ಟು ಬೀಳಲಿದೆ.
ಬಳ್ಳಾರಿ ಹೊರವಲಯದ ಕಪ್ಪಗಲ್ಲು ಗ್ರಾಮದ ಕೋಳಿ ಫಾರಂವೊಂದರಲ್ಲಿ ವಾರದಿಂದ ಈಚೆಗೆ 8 ಸಾವಿರ ಕೋಳಿಗಳು ಸಾವಿಗೀಡಾಗಿವೆ. ಕೋಳಿ ಸಾವಿಗೆ ಹಕ್ಕಿ ಜ್ವರ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು ಪರೀಕ್ಷೆಗಾಗಿ ಮಾದರಿಯನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿದೆ.
'ರವಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಕೋಳಿಗಳ ಮರಣಮೃದಂಗ ನಿರಂತರವಾಗಿದೆ. ಮೊದಲು 15 ಸಾವಿರ ಕೋಳಿಗಳಿದ್ದವು, ಈವರೆಗೆ 8 ಸಾವಿರ ಕೋಳಿಗಳು ಮೃತಪಟ್ಟಿವೆ. ಸದ್ಯ 7 ಸಾವಿರ ಕೋಳಿಗಳು ಮಾತ್ರವೇ ಜೀವಂತ ಇವೆ. ಇನ್ನೂ, ಹೆಚ್ಚಿನ ಪ್ರಮಾಣದಲ್ಲಿ ಕೋಳಿಗಳು ಸಾಯುವ ಸಾಧ್ಯತೆ ಇದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
'ಮೃತ ಕೋಳಿಗಳ ಮಾದರಿಗಳನ್ನು ಬೆಂಗಳೂರಿಗೆ ಕಳುಹಿಸಲಾಗಿದೆ. ಅದನ್ನು ಭೋಪಾಲ್ನಲ್ಲಿರುವ 'ರಾಷ್ಟ್ರೀಯ ಉನ್ನತ ಪ್ರಾಣಿ ರೋಗಗಳ ಸಂಸ್ಥೆ'ಗೆ ರವಾನಿಸಿ ಪರೀಕ್ಷೆ ನಡೆಸಲಾಗುವುದು. ಸೋಮವಾರದ ವೇಳೆಗೆ ಪರೀಕ್ಷಾ ವರದಿ ಬರಬಹುದು. ಹಕ್ಕಿ ಜ್ವರ ಇರುವುದು ದೃಢಪಟ್ಟರೆ, ಉಳಿದ ಕೋಳಿಗಳನ್ನೂ ವಧೆ ಮಾಡಲಾಗುವುದು ಎಂದು ಇಲಾಖೆಯ ಉಪನಿರ್ದೇಶಕ ಡಾ. ಕಾರಬಾರಿ ಅವರು ಮಾಹಿತಿ ನೀಡಿದ್ದಾರೆ.
'ಜಿಲ್ಲೆಯಲ್ಲಿ ಹಕ್ಕಿ ಜ್ವರ ತಡೆಯಲು ಮತ್ತು ಪರಿಶೀಲಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಪಶು ಸಂಗೋಪನಾ ಇಲಾಖೆಯು 10 ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ನಿತ್ಯ ಇಲಾಖೆಗೆ ವರದಿ ನೀಡಲಿವೆ. ಬಳ್ಳಾರಿ ಜಿಲ್ಲೆಯು ಆಂಧ್ರ ಪ್ರದೇಶದೊಂದಿಗೆ ಗಡಿ ಹಂಚಿಕೊಂಡಿದ್ದು, ಚೆಕ್ಪೋಸ್ಟ್ಗಳಲ್ಲೂ ಪರಿಶೀಲನೆ ನಡೆದಿದೆ. ಬಳ್ಳಾರಿಯಲ್ಲಿ ಒಟ್ಟು 74 ಕೋಳಿ ಫಾರಂಗಳಿವೆ. 14 ಮೊಟ್ಟೆ ಸಂವರ್ಧನಾ ಕೇಂದ್ರಗಳಿವೆ. ಇವುಗಳ ಮೇಲೂ ನಿಗಾ ವಹಿಸಲಾಗಿದೆ ಎಂದವರು ತಿಳಿಸಿದ್ದಾರೆ.
To prevent the spread of Avian influenza, commonly known as bird flu, the Karnataka government has initiated mass culling. Bird flu is a viral disease that mainly impacts poultry but can sometimes affect mammals, including humans and pigs.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm