ಬ್ರೇಕಿಂಗ್ ನ್ಯೂಸ್
03-03-25 12:33 pm HK News Desk ಕರ್ನಾಟಕ
ಮೈಸೂರು, ಮಾ 03: "ನಟ-ನಟಿಯರು ಕನ್ನಡಿಗರಿಂದಲೇ ಕನ್ನಡ ನೆಲದಲ್ಲಿ ಸ್ಟಾರ್ ಆಗಿರುವುದು. ನಿಮಗೆ ಸಿನಿಮಾಗಳಿಗೆ ಸಬ್ಸಿಡಿ ಬೇಕು ಅಂದಾಗ, ನಮ್ಮ ಬಳಿ ಬರ್ತೀರ, ಆದ್ರೆ ಕನ್ನಡದ ನೆಲ, ಜಲ, ಭಾಷೆ ಬೇಡವೇ? ನಟ್ಟು, ಬೋಲ್ಟ್ ನಾಳೆ ಅಲ್ಲ, ಇವತ್ತೇ ಟೈಟ್ ಮಾಡ್ಬೇಕು" ಎಂದು ಡಿಕೆಶಿ ಹೇಳಿಕೆಯನ್ನ ಶಾಸಕ ಶಾಸಕ ರವಿಕುಮಾರ್ ಗಣಿಗ ಸಮರ್ಥಿಸಿಕೊಂಡರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಿ ನಟ್ ಬೋಲ್ಟ್ ಟೈಟ್ ಮಾಡಿ ರಿಪೇರಿ ಮಾಡಬೇಕೋ ಮಾಡುತ್ತೇವೆ ಎಂಬ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ತೆಲಂಗಾಣದಲ್ಲಿ ಸಿಎಂ ರೇವಂತ್ ರೆಡ್ಡಿ ಮಾಡಿರುವ ರೀತಿಯಲ್ಲೇ ನಾವೂ ಮಾಡಬೇಕು. ಕನ್ನಡದ ಕಾರ್ಯಕ್ರಮ ಎಂದರೆ ಕನ್ನಡದ ನಟರಿಗೆ ಏಕೆ ಅಸಡ್ಡೆ?. ವಿಧಾನಸೌಧದ ಮುಂದೆ ನಿಮಗಾಗಿ ಕಾರ್ಯಕ್ರಮ ಮಾಡಿದ್ದೇವೆ. ಮರ್ಯಾದೆಯಿಂದ ಆಹ್ವಾನ ಕಳುಹಿಸಿದ್ದರೆ ಏಕೆ ಬರುವುದಿಲ್ಲ?. ಕ್ಯಾನ್ಸರ್ ಕಾಯಿಲೆಗೆ ಶಸ್ತ್ರಚಿಕಿತ್ಸೆ ಆಗಿದ್ದರೂ ಶಿವರಾಜ್ ಕುಮಾರ್ ಬಂದಿದ್ದಾರೆ. ಇನ್ನುಳಿದವರಿಗೆ ಏನಾಗಿದೆ. ನಮ್ಮ ಸರ್ಕಾರ ಪ್ರಶಸ್ತಿ ಕೊಟ್ಟರೆ ಬೇಡ ಎನ್ನುತ್ತೀರಿ. ಅದೇ ಬಾಲಿವುಡ್ನವರು ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೆದುಕೊಳ್ಳುತ್ತೀರಿ" ಎಂದು ಕಿಡಿಕಾರಿದರು.
ಡಾ.ರಾಜಕುಮಾರ್, ಅಂಬರೀಶ್, ವಿಷ್ಣುವರ್ಧನ್ ಅವರೆಲ್ಲ ರಾಜ್ಯೋತ್ಸವಕ್ಕೂ ಬರುತ್ತಿದ್ದರು. ಅಭಿಮಾನಿಗಳು ಅವರನ್ನು ಹೊತ್ತು ಮೆರೆಸಿದ್ದಕ್ಕೆ ಅವರು ಸ್ಟಾರ್ಗಳಾಗಿದ್ದು. ಈಗಿನ ನಟರಲ್ಲಿ ದರ್ಶನ್ ಹೊರತುಪಡಿಸಿ ಎಷ್ಟು ಜನ ರಾಜ್ಯೋತ್ಸವ ಸಮಾರಂಭಕ್ಕೆ ಬರುತ್ತಾರೆ?. ಇದೆಲ್ಲವನ್ನೂ ನಾವು ಪ್ರಶ್ನೆ ಮಾಡಬಾರದೇ?. ಕಾರ್ಯಕ್ರಮಕ್ಕೆ ಬರುವುದು ನಿಮ್ಮ ವಿವೇಚನೆಯಾದರೆ. ನಿಮ್ಮ ಸಿನಿಮಾ ನೋಡಬೇಕೇ ಬೇಡವೇ ಅನ್ನುವುದು ನಮ್ಮ ವಿವೇಚನೆ ಎಂದು ಶಾಸಕ ಗಣಿಕ ಎಚ್ಚರಿಕೆ ರವಾನಿಸಿದರು.
Mysuru Mla Ravi Kumar ganiga supports DK remarks on Kannada film industry. ‘I Know Where to Tighten the Nuts and Bolts’: DK Shivakumar Explodes Over Low Celebrity Turnout at Film Festival
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm