ಬ್ರೇಕಿಂಗ್ ನ್ಯೂಸ್
03-03-25 02:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ''ನಟ್ ಬೋಲ್ಟ್ ರಿಪೇರಿ ಮಾಡಲು ಬಹಳ ಜನ ಇದ್ದಾರೆ. ರಾಜ್ಯದ ಜನತೆ ಇವರಿಗೆ 135 ಸೀಟು ಕೊಟ್ಟಿರುವುದು ರಿಪೇರಿ ಮಾಡುವುದಕ್ಕಲ್ಲ, ರಾಜ್ಯದ ಜನರ ಸಮಸ್ಯೆ ಆಲಿಸುವುದಕ್ಕೆ'' ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ''ಡಿ. ಕೆ. ಶಿವಕುಮಾರ್ ಬಹುಶಃ ಭೂಮಿ ಮೇಲಿಲ್ಲ ಅನಿಸುತ್ತದೆ. ಅಧಿಕಾರ ಹಾಗೆ ಮಾತನಾಡಿಸುತ್ತಿದೆ. ಅವರ ಬಗ್ಗೆ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು'' ಎಂದು ವ್ಯಂಗ್ಯವಾಡಿದರು.
ಡಿ.ಕೆ. ಶಿವಕುಮಾರ್ ಹಿಂದುತ್ವದ ಜಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ''ಅದು ಅವರವರ ಭಾವಕ್ಕೆ ಬಿಟ್ಟದ್ದು. ನಾನು ಟೀಕೆ ಮಾಡಲು ಹೋಗಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರೇ ಅವರವರ ಭಾವನೆಗೆ ಅವಕಾಶ ನೀಡಿದ್ದಾರೆ. ಇದರಲ್ಲಿ ವಿಶ್ಲೇಷಣೆ ಮಾಡುವುದಕ್ಕೆ ಏನಿದೆ?'' ಎಂದರು.
ನಾನೇ ರಾಜಕೀಯಕ್ಕೆ ಬರುತ್ತೇನೆ ಅಂದುಕೊಂಡಿರಲಿಲ್ಲ :
'ರಾಜಕಾರಣಿಗಳ ಮಕ್ಕಳು ಚಲನಚಿತ್ರ ಕ್ಷೇತ್ರದಲ್ಲಿ ಪ್ಲಾಫ್ ಆಗಿ, ಈಗ ರಾಜಕಾರಣಕ್ಕೆ ಬಂದಿದ್ದಾರೆ' ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ''ಜೀವನದಲ್ಲಿ ಅನೇಕ ಬಾರಿ ಸೋಲು, ಗೆಲುವು ಇರುತ್ತದೆ. ಕೆಲವು ಬಾರಿ ಬದಲಾವಣೆ ಆಗುತ್ತದೆ. ನಾನೇ ಒಂದು ಕಾಲದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಇದ್ದೆ. ಸಿನಿಮಾ ಹಂಚಿಕೆದಾರನಾಗಿದ್ದೆ. ಯಾವುದೇ ಸಂದರ್ಭದಲ್ಲಿಯೂ ರಾಜಕೀಯಕ್ಕೆ ಬರುತ್ತೇನೆ ಎಂದುಕೊಂಡಿರಲಿಲ್ಲ. ನಾನೇ ಅಚಾನಕ್ಕಾಗಿ ರಾಜಕೀಯಕ್ಕೆ ಬಂದೆ. ಏಳು ಬೀಳು ಎನ್ನುವುದು ಎಲ್ಲರಿಗೂ ಇರುತ್ತದೆ. ಅವರ ಹೇಳಿಕೆಗೆ ಅಷ್ಟೇನೂ ಪ್ರಾಮುಖ್ಯತೆ ಕೊಡಬೇಕಿಲ್ಲ'' ಎಂದು ತಿಳಿಸಿದರು.
HD Kumaraswamy slams DK Shivakumar over remarks on film industry. People haven't elected congress to repair but to rule the state he added.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm