ಬ್ರೇಕಿಂಗ್ ನ್ಯೂಸ್
03-03-25 02:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 03: ''ನಟ್ ಬೋಲ್ಟ್ ರಿಪೇರಿ ಮಾಡಲು ಬಹಳ ಜನ ಇದ್ದಾರೆ. ರಾಜ್ಯದ ಜನತೆ ಇವರಿಗೆ 135 ಸೀಟು ಕೊಟ್ಟಿರುವುದು ರಿಪೇರಿ ಮಾಡುವುದಕ್ಕಲ್ಲ, ರಾಜ್ಯದ ಜನರ ಸಮಸ್ಯೆ ಆಲಿಸುವುದಕ್ಕೆ'' ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ''ಡಿ. ಕೆ. ಶಿವಕುಮಾರ್ ಬಹುಶಃ ಭೂಮಿ ಮೇಲಿಲ್ಲ ಅನಿಸುತ್ತದೆ. ಅಧಿಕಾರ ಹಾಗೆ ಮಾತನಾಡಿಸುತ್ತಿದೆ. ಅವರ ಬಗ್ಗೆ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು'' ಎಂದು ವ್ಯಂಗ್ಯವಾಡಿದರು.
ಡಿ.ಕೆ. ಶಿವಕುಮಾರ್ ಹಿಂದುತ್ವದ ಜಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ''ಅದು ಅವರವರ ಭಾವಕ್ಕೆ ಬಿಟ್ಟದ್ದು. ನಾನು ಟೀಕೆ ಮಾಡಲು ಹೋಗಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರೇ ಅವರವರ ಭಾವನೆಗೆ ಅವಕಾಶ ನೀಡಿದ್ದಾರೆ. ಇದರಲ್ಲಿ ವಿಶ್ಲೇಷಣೆ ಮಾಡುವುದಕ್ಕೆ ಏನಿದೆ?'' ಎಂದರು.
ನಾನೇ ರಾಜಕೀಯಕ್ಕೆ ಬರುತ್ತೇನೆ ಅಂದುಕೊಂಡಿರಲಿಲ್ಲ :
'ರಾಜಕಾರಣಿಗಳ ಮಕ್ಕಳು ಚಲನಚಿತ್ರ ಕ್ಷೇತ್ರದಲ್ಲಿ ಪ್ಲಾಫ್ ಆಗಿ, ಈಗ ರಾಜಕಾರಣಕ್ಕೆ ಬಂದಿದ್ದಾರೆ' ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ''ಜೀವನದಲ್ಲಿ ಅನೇಕ ಬಾರಿ ಸೋಲು, ಗೆಲುವು ಇರುತ್ತದೆ. ಕೆಲವು ಬಾರಿ ಬದಲಾವಣೆ ಆಗುತ್ತದೆ. ನಾನೇ ಒಂದು ಕಾಲದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಇದ್ದೆ. ಸಿನಿಮಾ ಹಂಚಿಕೆದಾರನಾಗಿದ್ದೆ. ಯಾವುದೇ ಸಂದರ್ಭದಲ್ಲಿಯೂ ರಾಜಕೀಯಕ್ಕೆ ಬರುತ್ತೇನೆ ಎಂದುಕೊಂಡಿರಲಿಲ್ಲ. ನಾನೇ ಅಚಾನಕ್ಕಾಗಿ ರಾಜಕೀಯಕ್ಕೆ ಬಂದೆ. ಏಳು ಬೀಳು ಎನ್ನುವುದು ಎಲ್ಲರಿಗೂ ಇರುತ್ತದೆ. ಅವರ ಹೇಳಿಕೆಗೆ ಅಷ್ಟೇನೂ ಪ್ರಾಮುಖ್ಯತೆ ಕೊಡಬೇಕಿಲ್ಲ'' ಎಂದು ತಿಳಿಸಿದರು.
HD Kumaraswamy slams DK Shivakumar over remarks on film industry. People haven't elected congress to repair but to rule the state he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm