ಬ್ರೇಕಿಂಗ್ ನ್ಯೂಸ್
03-03-25 08:11 pm HK News Desk ಕರ್ನಾಟಕ
ಕೊಪ್ಪಳ, ಮಾ 03: ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಭಾರೀ ಚರ್ಚೆಯಾಗುತ್ತಿದೆ. ಇತ್ತೀಚೆಗೆ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿಸಿಎಂ ಡಿಕೆ ದೆಹಲಿಗೆ ಹೋಗಿ ಬಂದ ಬಳಿಕ ನೀಡಿದ ಹೇಳಿಕೆಗಳು ಮತ್ತೊಂದು ಸಿಎಂ ಸಿದ್ದರಾಮಯ್ಯ ಆಪ್ತ ಬಣದಲ್ಲಿ ನಡುಕ ಹುಟ್ಟಿಸಿದೆ. ಅಷ್ಟೇ ಅಲ್ಲದೇ ಸಿಎಂ ಸ್ಥಾನ ನೀಡದಿದ್ರೆ ಬಿಜೆಪಿ ಸೇರುವ ಎಚ್ಚರಿಕೆಯ ಸಂದೇಶವನ್ನೂ ಡಿಕೆ ಶಿವಕುಮಾರ್ ನೀಡಿದ್ದಾರೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಸಿದ್ದರಾಮಯ್ಯ ಆಪ್ತರು ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದರೆ, ಡಿಕೆಶಿ ಪರವಾಗಿ ಬೆರಳೆಣಿಕೆಯಷ್ಟು ಜನರು ಮಾತ್ರ ಮಾತನಾಡುತ್ತಿದ್ದಾರೆ. ಈ ನಡುವೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಡಿಕೆ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಸಿದ್ದರಾಮಯ್ಯನವರಿಗೆ ವಯಸ್ಸಾಗಿದೆ, ಅವರಿಗೆ ಆರೋಗ್ಯದ ಸಮಸ್ಯೆ ಕೂಡ ಇದೆ ಹಾಗಾಗಿ ಅವರು ಸಿಎಂ ಸ್ಥಾನ ಬಿಟ್ಟು ಕೊಡಬಹುದು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಡಿಕೆ ಶಿವಕುಮಾರ್ ಅವರು ತಾವು ಹಿಂದೂ ಎನ್ನುವ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ರೆಡ್ಡಿ, ಡಿಕೆ ಹಿಂದೂವಾಗಿ ಹುಟ್ಟಿದ್ದಾರೆ. ಹಿಂದೂವಾಗಿಯೇ ಮುಂದುವರಿಯುತ್ತಾರೆ. ಅವರು ಮಾಡುತ್ತಿರುವ ಪೂಜೆ, ಹಿಂದೂ ಸಂಸ್ಕೃತಿ ಆಚರಣೆಯಾಗಿದೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಅವರ ರಾಜಕೀಯ ಏನೇ ಆಗಿರಲಿ, ಅವರು ಸಾರ್ವಜನಿಕವಾಗಿ ಪೂಜೆ ಪುನಸ್ಕಾರ ಮಾಡುತ್ತಿರುವುದು ಇದೇ ಮೊದಲಲ್ಲ ಎಂದು ಹೇಳಿದ್ದಾರೆ.
ಇನ್ನು ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ದಿವಾಳಿ ಆಗಿದೆ. ಹಿಂದುಳಿದ ವರ್ಗಗಳ, ಎಸ್ಸಿಪಿ ಟಿಎಸ್ಪಿ ಹಣ ದುರ್ಬಳಕೆ ಮಾಲಾಗುತ್ತಿದೆ. ಪ್ರಾರಂಭಿಕ 6 ಪಂಚ ವಾರ್ಷಿಕ ಯೋಜನೆಗಳಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆ ತರಲಿಲ್ಲ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಇದರ ನಡುವೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ ಅವರು, ದಲಿತರಿಗೆ ಅನ್ಯಾಯ ಮಾಡಿ ಅಹಿಂದ ನಾಯಕ ಅಂತ ಹೇಳ್ತೀರಲ್ಲ, ನಿಮಗೆ ನಾಚಿಕೆ ಆಗೋದಿಲ್ವಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಖರ್ಗೆ ಅವರೇ, ನೀವಾದರೂ ಸಿದ್ದರಾಮಯ್ಯಗೆ ಬುದ್ದಿ ಹೇಳಬೇಕಿತ್ತು. ಖರ್ಗೆ ಅವರ ದಲಿತರ ವಿಚಾರದಲ್ಲಿ ಸುಮ್ಮನಾಗಿದ್ದಾರೆ. ಕಾಂಗ್ರೆಸ್ ಪಕ್ಷ ದಲಿತರಿಗೆ ಅನ್ಯಾಯ ಮಾಡಿದೆ, ಅದರೂ ದಲಿತ ನಾಯಕರು ಯಾರು ಅದನ್ನು ಕೇಳುತ್ತಿಲ್ಲ ಯಾಕೆ? ಎಂದು ಅವರು ಪ್ರಶ್ನೆ ಮಾಡಿದರು.
Siddaramaiah should resign due to health issues says Janardhana Reddy, indirectly supports DK Shivakumar. Karnataka Chief Minister Siddaramaiah is likely to step down from his position due to personal and health issues, which may lead to the collapse of the Congress government in the state, claimed Gangavathi MLA Gali Janardhan Reddy.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm