ಬ್ರೇಕಿಂಗ್ ನ್ಯೂಸ್
05-03-25 01:47 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಸದನ ಕಲಾಪದ ನೇರ ಪ್ರಸಾರದಲ್ಲಿ ಪ್ರತಿಪಕ್ಷ ಸದಸ್ಯರ ಮಾತು ಪ್ರಸಾರವಾಗದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಇದಕ್ಕೆ ಸಂಬಂಧಪಟ್ಟ ಅಧಿಕಾರಿಯನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.
ವಿಧಾನಸಭೆ ಕಲಾಪದ ನೇರ ಪ್ರಸಾರದಲ್ಲಿ ವಿರೋಧ ಪಕ್ಷದ ಸದಸ್ಯರನ್ನು ತೋರಿಸದೇ, ಕೇವಲ ಆಡಳಿತ ಪಕ್ಷದವರನ್ನು ತೋರಿಸಲಾಗುತ್ತಿತ್ತು. ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಕಲಾಪವನ್ನು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಗಿತ್ತು. ಭೋಜನ ವಿರಾಮದ ಬಳಿಕವೂ ಪ್ರತಿಪಕ್ಷ ನಾಯಕರ ಭಾಷಣ ಪ್ರಸಾರವಾಗಿರಲಿಲ್ಲ.
ಇದನ್ನು ಗಂಭೀರವಾಗಿ ಪರಿಗಣಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಈ ಬಗ್ಗೆ ತನಿಖೆ ಕೈಗೊಂಡು ಸಂಬಂಧಪಟ್ಟ ಅಧಿಕಾರಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ್ದರು. ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಸಂಬಂಧಪಟ್ಟ ಅಧಿಕಾರಿಯನ್ನು ಅಮಾನತುಗೊಳಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ತನಿಖೆ ನಂತರ ಘಟನೆಗೆ ಕಾರಣವಾದ ಅಧಿಕಾರಿಯನ್ನು ಸಸ್ಪೆಂಡ್ ಮಾಡಿದ್ದಾರೆ.
ಇದಕ್ಕೆ ಬಿಜೆಪಿ ಸದಸ್ಯರು ಕಿರಿಯ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳದೆ ಹಿರಿಯ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು. ಇದಾದ ಕೆಲವು ನಿಮಿಷಗಳ ಬಳಿಕ ಸಮಸ್ಯೆ ಬಗೆಹರಿಯಿತು.
The House was adjourned by Speaker UT Khader after BJP members created a ruckus complaining that the visuals of them speaking were not being shown live. While there was no issue with the visuals of Congress ministers, MLAs, and Speaker on screen, there was some “technical” error with visuals of BJP members while speaking. BJP members also alleged that the government has given the contract of telecasting House proceedings to Congress workers.
09-08-25 10:12 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
Fraud Case, Dhruva Sarja, Mumbai: ಆಕ್ಷನ್ ಪ್ರಿ...
09-08-25 01:40 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
09-08-25 10:53 pm
Mangalore Correspondent
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
ಧರ್ಮಸ್ಥಳ ಕ್ಷೇತ್ರದ ಘನತೆ ಕುಗ್ಗಿಸಲೆತ್ನಿಸುತ್ತಿರುವ...
09-08-25 08:10 pm
Father Muller Medical College, Hospital, Mang...
09-08-25 04:22 pm
Dharmasthala,16th Spot at Bahubali Hill: ಧರ್ಮ...
09-08-25 02:16 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm