ಬ್ರೇಕಿಂಗ್ ನ್ಯೂಸ್
05-03-25 01:58 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಮಾಜಿ ಸಿಎಂ ಯಡಿಯೂರಪ್ಪ ಲಿಂಗಾಯತರೇ ಅಲ್ಲ. ಅವರು ಬಳೆಗಾರ ಶೆಟ್ಟರು. ಅವರ ಹುಟ್ಟೂರಾದ ಮಂಡ್ಯದ ಬೂಕನಕೆರೆಗೆ ಹೋಗಿ ಕೇಳಿದರೆ, ನಿಜ ಗೊತ್ತಾಗುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತೆ ಕಾಲು ಕೆರೆದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ವೀರೇಂದ್ರ ಪಾಟೀಲ, ಜೆ.ಎಚ್.ಪಟೇಲ್ ನಂತರ ಸಮುದಾಯದಲ್ಲಿ ಯಾರೂ ನಾಯಕರು ಇರಲಿಲ್ಲ. ಜನರು ಅನಿವಾರ್ಯವಾಗಿ ಯಡಿಯೂರಪ್ಪ ಅವರನ್ನು ಒಪ್ಪಿದ್ದರು. ಆದರೆ ಅವರು ವೀರಶೈವರು ಮತ್ತು ಪಂಚಮಸಾಲಿಗಳಿಗೆ ಮೀಸಲಾತಿ ನೀಡದೆ, ಮೋಸ ಮಾಡಿದರು ಎಂದರು.
ಯಡಿಯೂರಪ್ಪ ಲಿಂಗಾಯತರ ಹೆಸರಿನಲ್ಲಿ ಬಿಜೆಪಿಯನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಅನ್ನು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ನಮ್ಮ ಆಕ್ಷೇಪ ಇರುವುದು ಕುಟುಂಬ ರಾಜಕಾರಣದ ಬಗ್ಗೆ ಮಾತ್ರ. ನರೇಂದ್ರ ಮೋದಿ ಸಹ ಕುಟುಂಬ ರಾಜಕಾರಣ ಒಪ್ಪುವುದಿಲ್ಲ ಎಂದರು.
ರೇಣುಕಾಚಾರ್ಯ ಅವರು ತಮ್ಮನ್ನು ನಾಯಿ ನರಿ ಎಂದಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾಯಿಗಳಿಗೆ ನಿಯತ್ತು ಇದೆ. ಆದರೆ ಹಂದಿಗಳಿಗೆ ನಿಯತ್ತು ಇಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರ ಪರ ರೇಣುಕಾಚಾರ್ಯ ಇಂದು ಮಾತನಾಡುತ್ತಿದ್ದಾರೆ. ಆದರೆ, ಅಂದು ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಗೋವಾಗೆ ಹೋಗಿ ಸಂಚು ಮಾಡಿದ್ದು ಇದೇ ರೇಣುಕಾಚಾರ್ಯ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ವಿಚಾರಕ್ಕೆ ಹೈಕಮಾಂಡ್ ಯಥಾಸ್ಥಿತಿ ಕಾಪಾಡಲು ತೀರ್ಮಾನಿಸಿದೆ. ಇದು ನಮ್ಮ ಶ್ರಮದ ಫಲ ಅಲ್ಲವೇ? ನಮ್ಮಲ್ಲಿ ಜನಪರ ವಿಚಾರಗಳಲ್ಲಿ ಭಿನ್ನಮತ ಇಲ್ಲ. ಕುಟುಂಬ ರಾಜಕಾರಣ, ಭ್ರಷ್ಟಾಚಾರದ ಕುಟುಂಬವನ್ನು ದೂರ ಇಡುವುದಷ್ಟೇ ನಮ್ಮ ಭಿನ್ನಮತಕ್ಕೆ ಕಾರಣ. ಕೆಪಿಎಸ್ಸಿ ವಿಚಾರದಲ್ಲಿ ನಾವು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.
BJP leader Basanagaouda Patil Yatnal claimed that Yediyurappa did not belong to the Lingayat community, but to the Balegara Shettaru community, a minuscule OBC community in the state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm