ಬ್ರೇಕಿಂಗ್ ನ್ಯೂಸ್
07-03-25 07:54 pm HK News Desk ಕರ್ನಾಟಕ
ಗಂಗಾವತಿ, ಮಾ 07: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟರೆ, ಕಾಯಿಲೆ ವಾಸಿಯಾಗುತ್ತದೆ ಎಂಬ ನಂಬಿಕೆಯಿಂದ ತಾಯಿಯೊಬ್ಬಳು ಮಾಡಿದ ಕೈ ಚಿಕಿತ್ಸೆಯ ಪರಿಣಾಮ ಮಗು ಮೃತಪಟ್ಟಿರುವ ವರದಿಯಾಗಿದೆ. ಮಗು ಮೃತಪಟ್ಟಿರುವ ಹಿನ್ನೆಲೆ ಇದೀಗ ತಾಯಿಯ ಮೇಲೆ ಕೇಸ್ ದಾಖಲಾಗಿದೆ.
ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಏಳು ತಿಂಗಳ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ತಾಯಿಯ ವಿರುದ್ಧ ಇದೀಗ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿನ ಮರಣೋತ್ತರ ಶವ ಪರೀಕ್ಷೆ ನಡೆಸಿದ ವೇಳೆ, ಅಲ್ಲಿನ ವೈದ್ಯರು ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು ನೀಡಿದ ದೂರಿನ ಮೆರೆಗೆ ಎಫ್ಐಆರ್ ದಾಖಲಾಗಿದೆ.
ಕಳೆದ ನವಂಬರ್ ಅಂದರೆ 2024ರಲ್ಲಿ ಗ್ರಾಮದ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಮಾಡಿದರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ಆಲಿಸಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ. ಹೀಗಾಗಿ ಮಗುವಿಗೆ ಸುಟ್ಟಗಾಯಗಳಿಂದ ನಂಜಾಗಿ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ.
ಅಗರಬತ್ತಿಯಿಂದ ಸುಟ್ಟಿದ್ದಕ್ಕೆ ನಂಜಾಗಿ ಮಗು ಮೃತಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿದ್ದರು. ಜಿಲ್ಲಾ ಮಟ್ಟದ ಶಿಶುಮರಣ ಪರಿಶೀಲನಾ ಸಭೆಯ ವೇಳೆ ಈ ವಿಷಯ ಗಮನಕ್ಕೆ ಬಂದ್ದು, ಇದೀಗ ತಾಯಿ ಮೇಲೆ ದೂರು ದಾಖಲಾಗಿದೆ.
Tragic Mistake Seven Month Old Baby Dies After Mother Accidentally Ignites Agarbatti, Case Filed in gangavathi in koppal
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 11:36 am
HK News Desk
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm