ಬ್ರೇಕಿಂಗ್ ನ್ಯೂಸ್
07-03-25 07:54 pm HK News Desk ಕರ್ನಾಟಕ
ಗಂಗಾವತಿ, ಮಾ 07: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟರೆ, ಕಾಯಿಲೆ ವಾಸಿಯಾಗುತ್ತದೆ ಎಂಬ ನಂಬಿಕೆಯಿಂದ ತಾಯಿಯೊಬ್ಬಳು ಮಾಡಿದ ಕೈ ಚಿಕಿತ್ಸೆಯ ಪರಿಣಾಮ ಮಗು ಮೃತಪಟ್ಟಿರುವ ವರದಿಯಾಗಿದೆ. ಮಗು ಮೃತಪಟ್ಟಿರುವ ಹಿನ್ನೆಲೆ ಇದೀಗ ತಾಯಿಯ ಮೇಲೆ ಕೇಸ್ ದಾಖಲಾಗಿದೆ.
ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಏಳು ತಿಂಗಳ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ತಾಯಿಯ ವಿರುದ್ಧ ಇದೀಗ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿನ ಮರಣೋತ್ತರ ಶವ ಪರೀಕ್ಷೆ ನಡೆಸಿದ ವೇಳೆ, ಅಲ್ಲಿನ ವೈದ್ಯರು ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು ನೀಡಿದ ದೂರಿನ ಮೆರೆಗೆ ಎಫ್ಐಆರ್ ದಾಖಲಾಗಿದೆ.
ಕಳೆದ ನವಂಬರ್ ಅಂದರೆ 2024ರಲ್ಲಿ ಗ್ರಾಮದ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಮಾಡಿದರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ಆಲಿಸಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ. ಹೀಗಾಗಿ ಮಗುವಿಗೆ ಸುಟ್ಟಗಾಯಗಳಿಂದ ನಂಜಾಗಿ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ.
ಅಗರಬತ್ತಿಯಿಂದ ಸುಟ್ಟಿದ್ದಕ್ಕೆ ನಂಜಾಗಿ ಮಗು ಮೃತಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿದ್ದರು. ಜಿಲ್ಲಾ ಮಟ್ಟದ ಶಿಶುಮರಣ ಪರಿಶೀಲನಾ ಸಭೆಯ ವೇಳೆ ಈ ವಿಷಯ ಗಮನಕ್ಕೆ ಬಂದ್ದು, ಇದೀಗ ತಾಯಿ ಮೇಲೆ ದೂರು ದಾಖಲಾಗಿದೆ.
Tragic Mistake Seven Month Old Baby Dies After Mother Accidentally Ignites Agarbatti, Case Filed in gangavathi in koppal
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm