ಬ್ರೇಕಿಂಗ್ ನ್ಯೂಸ್
07-03-25 07:54 pm HK News Desk ಕರ್ನಾಟಕ
ಗಂಗಾವತಿ, ಮಾ 07: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟರೆ, ಕಾಯಿಲೆ ವಾಸಿಯಾಗುತ್ತದೆ ಎಂಬ ನಂಬಿಕೆಯಿಂದ ತಾಯಿಯೊಬ್ಬಳು ಮಾಡಿದ ಕೈ ಚಿಕಿತ್ಸೆಯ ಪರಿಣಾಮ ಮಗು ಮೃತಪಟ್ಟಿರುವ ವರದಿಯಾಗಿದೆ. ಮಗು ಮೃತಪಟ್ಟಿರುವ ಹಿನ್ನೆಲೆ ಇದೀಗ ತಾಯಿಯ ಮೇಲೆ ಕೇಸ್ ದಾಖಲಾಗಿದೆ.
ಕನಕಗಿರಿ ತಾಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಏಳು ತಿಂಗಳ ಮಗು ಮೃತಪಟ್ಟ ಹಿನ್ನೆಲೆಯಲ್ಲಿ ಆಕೆಯ ತಾಯಿಯ ವಿರುದ್ಧ ಇದೀಗ ಕನಕಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಗುವಿನ ಮರಣೋತ್ತರ ಶವ ಪರೀಕ್ಷೆ ನಡೆಸಿದ ವೇಳೆ, ಅಲ್ಲಿನ ವೈದ್ಯರು ಸುಟ್ಟಗಾಯಗಳಿಂದ ನಂಜಾಗಿ ಮಗು ಸಾವನ್ನಪ್ಪಿದೆ ಎಂಬುದನ್ನು ಕಂಡುಕೊಂಡಿದ್ದಾರೆ. ಈ ಬಗ್ಗೆ ಮರಣೋತ್ತರ ಪರೀಕ್ಷೆಯ ವರದಿಯನ್ನೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ್ ಎಂಬುವವರು ನೀಡಿದ ದೂರಿನ ಮೆರೆಗೆ ಎಫ್ಐಆರ್ ದಾಖಲಾಗಿದೆ.
ಕಳೆದ ನವಂಬರ್ ಅಂದರೆ 2024ರಲ್ಲಿ ಗ್ರಾಮದ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ. ಹೀಗಾಗಿ ಮಗುವಿಗೆ ಅಗರಬತ್ತಿಯ ಬೆಂಕಿಯಿಂದ ಬಿಸಿ ಮಾಡಿದರೆ ವಾಸಿಯಾಗುತ್ತದೆ ಎಂದು ಯಾರೋ ಹೇಳಿದ್ದ ಮಾತನ್ನು ಆಲಿಸಿದ ತಾಯಿ, ಅದನ್ನು ಪ್ರಯೋಗ ಮಾಡಿದ್ದಾರೆ. ಹೀಗಾಗಿ ಮಗುವಿಗೆ ಸುಟ್ಟಗಾಯಗಳಿಂದ ನಂಜಾಗಿ ಸಾವನ್ನಪ್ಪಿದೆ ಎಂದು ಗೊತ್ತಾಗಿದೆ.
ಅಗರಬತ್ತಿಯಿಂದ ಸುಟ್ಟಿದ್ದಕ್ಕೆ ನಂಜಾಗಿ ಮಗು ಮೃತಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಮಕ್ಕಳ ರಕ್ಷಣಾ ಘಟಕದವರಿಗೆ ಮಾಹಿತಿ ನೀಡಿದ್ದರು. ಜಿಲ್ಲಾ ಮಟ್ಟದ ಶಿಶುಮರಣ ಪರಿಶೀಲನಾ ಸಭೆಯ ವೇಳೆ ಈ ವಿಷಯ ಗಮನಕ್ಕೆ ಬಂದ್ದು, ಇದೀಗ ತಾಯಿ ಮೇಲೆ ದೂರು ದಾಖಲಾಗಿದೆ.
Tragic Mistake Seven Month Old Baby Dies After Mother Accidentally Ignites Agarbatti, Case Filed in gangavathi in koppal
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm