ಬ್ರೇಕಿಂಗ್ ನ್ಯೂಸ್
07-03-25 09:21 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 07: ಕರ್ನಾಟಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಸ್ಲಾಮೀಕರಣಗೊಳಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯ ಬಜೆಟ್ನಲ್ಲಿ ಮುಸ್ಲಿಮರಿಗೆ ಹೆಚ್ಚಿನ ಅನುದಾನ ನೀಡಲಾಗಿದ್ದು, ಇದೊಂದು 'ಹಲಾಲ್ ಬಜೆಟ್', ಅಂಬೇಡ್ಕರ್ ಆಶಯಗಳಿಗೆ ವಿರುದ್ಧವಾಗಿದೆ ಎಂದು ಟೀಕಿಸಿದೆ.
ಬಜೆಟ್ನಲ್ಲಿ ಮುಸ್ಲಿಂಮರಿಗೆ ಹೆಚ್ಚಿನ ಘೋಷಣೆ ಮಾಡಲಾಗಿದ್ದು, ಈ ಕುರಿತು ಬಿಜೆಪಿ ಪಟ್ಟಿ ಮಾಡಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ, ಮುಸ್ಲಿಮರ ಸರಳ ಮದುವೆಗೆ ₹50 ಸಾವಿರ, ವಕ್ಫ್, ಖಬರಸ್ಥಾನಗಳ ಮೂಲಸೌಕರ್ಯಕ್ಕೆ ₹150 ಕೋಟಿ, ಮುಸ್ಲಿಮರ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ₹50 ಲಕ್ಷ, ಮುಸ್ಲಿಮರು ಅತಿಹೆಚ್ಚು ವಾಸವಿರುವ ಪ್ರದೇಶದಲ್ಲಿ ITI ಸ್ಥಾಪನೆ, KEA ಅಡಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಶೇ.50 ರಷ್ಟು ಶುಲ್ಕ ಕಡಿತ, ಉಲ್ಲಾಳದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ವಸತಿ ಸಹಿತ ಪಿ.ಯು ಕಾಲೇಜು, ಮುಸ್ಲಿಂ ವಿದ್ಯಾರ್ಥಿಗಳ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ ಏರಿಕೆ, ಬೆಂಗಳೂರಿನ ಹಜ್ ಭವನದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣ, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿಯನ್ನು ಬಜೆಟ್ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದೆ.

ದೇಶದ ಯಾವುದೇ ರಾಜ್ಯದಲ್ಲೂ ಇಲ್ಲದ ಕಾಂಗ್ರೆಸ್ನ ದಿವಾಳಿ ಮಾಡೆಲ್ ಜಾರಿ ಆಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಅಂಬೇಡ್ಕರ್ ಆಶಯಗಳಿಗೆ ವಿರುದ್ಧ: ಬಿಜೆಪಿ
ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬೋಗಸ್ ಬಜೆಟ್ನಲ್ಲಿ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿಯನ್ನು ನೀಡಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯಗಳಿಗೆ ಸಂಪೂರ್ಣ ವಿರುದ್ಧವಾದಂತಹದ್ದು!! ಕಾಂಗ್ರೆಸ್ ಪಕ್ಷಕ್ಕೆ ಬಾಬಾ ಸಾಹೇಬರ ಮೇಲೆ ಎಷ್ಟು ದ್ವೇಷವಿದೆ ಎಂಬುದು ಸಿದ್ದರಾಮಯ್ಯ ಅವರ ಸಂವಿಧಾನ ವಿರೋಧಿ ಬಜೆಟ್ನಿಂದ ಮತ್ತೊಮ್ಮೆ ಜಗಜ್ಜಾಹೀರಾಗಿದೆ ಎಂದು ಮಗದೊಂದು ಪೋಸ್ಟ್ನಲ್ಲಿ ಬಿಜೆಪಿ ಆರೋಪಿಸಿದೆ.
ಮನಸ್ಸಿನ ಕೊಳಕು ಭಾವನೆ ಹೊರ ಬಂದಿದೆ, ಸಿದ್ದು ಗರಂ ;
ಬಿಜೆಪಿಯವರು ಹಲಾಲ್ ಬಜೆಟ್ ಅಂತಾರೆ. ಆ ಮೂಲಕ ಮನಸ್ಸಿನ ಕೊಳಕು ಭಾವನೆ ಹೊರ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳು ಎಸ್ ಸಿಎಸ್ಪಿ ಟಿಎಸ್ಪಿ ಕಾಯ್ದೆ ಮಾಡಿರುವುದು ತೋರಿಸಲಿ. ಕೇಂದ್ರಕ್ಕೆ ಕೇಳುವ ಧೈರ್ಯ ಬಿಜೆಪಿಯವರಿಗೆ ಇಲ್ಲ. ಅವರಿಗೆ ಯಾವ ನೈತಿಕ ಹಕ್ಕು ಇದೆ? ಎಂದು ಪ್ರಶ್ನಿಸಿದರು. ನಾವು ಸಮಾನತೆಯಲ್ಲಿ ನಂಬಿಕೆ ಇಟ್ಟವರು. ಪಾಕಿಸ್ತಾನ ಬಜೆಟ್ ಅನ್ನುವುದು ಅವರು ಜಾತ್ಯಾತೀತ ವಿರೋಧಿಗಳು ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.
ಧರ್ಮ- ಜಾತಿ ನೋಡಲು ಆಗಲ್ಲ:ಒಂದು ಧರ್ಮವನ್ನು, ಜಾತಿಯನ್ನು ನೋಡಲು ಆಗಲ್ಲ. ಜಾತ್ಯಾತೀತವಾದಕ್ಕೆ ಅವರು ವಿರೋಧಿಗಳಾಗಿದ್ದಾರೆ. ಸಂವಿಧಾನ ವಿಚಾರಕ್ಕೆ ಅವರು ವಿರೋಧಿಗಳಾಗಿದ್ದಾರೆ. ಬಿಜೆಪಿಯವರು ಸಂಕುಚಿತ ಮನೋಭಾವನೆ ಇರುವವರು. ನಾವು ಧರ್ಮದ ಆಧಾರದಲ್ಲಿ ಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿಲ್ಲ. ಅವರಿಗೆ ಮುಸ್ಲಿಂರನ್ನು ವಿರೋಧಿಸುವುದೇ ರಾಜಕೀಯ ನಿಲುವು ಆಗಿದೆ. ಸರ್ವರಿಗೆ ಸಮಪಾಲು ಎಲ್ಲರಿಗೂ ಸಿಕ್ಕಿಲ್ಲ. ಆ ದಿಕ್ಕಿನಲ್ಲಿ ನಾವು ನಡೆಯುತ್ತಿದ್ದೇವೆ ಎಂದು ತಿಳಿಸಿದರು.
The Bharatiya Janata Party on Friday launched a scathing attack on the ruling Congress in Karnataka after Chief Minister Siddaramaiah presented his record 16th Budget. The BJP said that appeasement is at its peak in the Congress regime. Taking to X, BJP listed out measures announced in the budget, especially for the Muslim community including reservations for Muslim contractors.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm