ಬ್ರೇಕಿಂಗ್ ನ್ಯೂಸ್
09-03-25 04:54 pm Headline Karnataka Staff ಕರ್ನಾಟಕ
ಚಿತ್ರದುರ್ಗ, ಮಾ 09: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರು ನಗರ ಮೂಲದವರಾಗಿದ್ದಾರೆ. ಘಟನೆಯಲ್ಲಿ ರುದ್ರಸ್ವಾಮಿ (60), ಮಲ್ಲಿಕಾರ್ಜುನ (50), ಶಾಂತಮೂರ್ತಿ (55) ಹಾಗೂ ಚಿದಂಬರಾಚಾರ್ (52) ಹಾಗೂ ಮತ್ತೋರ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಘಟನೆಗೆ ಮೂಲ ಕಾರಣ ಏನೆಂದು ಪರಿಶೀಲಿಸಿದಾಗ, ಇನ್ನೋವಾ ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ'' ಎಂದು ಮಾಹಿತಿ ನೀಡಿದರು
''ಮೃತರೆಲ್ಲರೂ ಬೆಳಗಾವಿಯ ಸವದತ್ತಿ ದೇವಸ್ಥಾನಕ್ಕೆ ಹೋಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರು ಸಂಚರಿಸುತ್ತಿದ್ದ ಕಾರಿನಲ್ಲಿ ಸವದತ್ತಿ ಯಲ್ಲಮ್ಮ ದೇವಾಲಯದ ಪ್ರಸಾದ ಕಂಡುಬಂದಿದೆ. ಹೀಗಾಗಿ, ದೇವಸ್ಥಾನಕ್ಕೆ ಹೋಗಿರುವ ಸಾಧ್ಯತೆ ಇದೆ. ಘಟನೆ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ'' ಎಂದು ಎಸ್ಪಿ ತಿಳಿಸಿದರು.
Five people were killed in a head-on collision between a car and a truck on the outskirts of the district headquarter town of Chitradurga on Sunday.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm