ಬ್ರೇಕಿಂಗ್ ನ್ಯೂಸ್
09-03-25 04:54 pm Headline Karnataka Staff ಕರ್ನಾಟಕ
ಚಿತ್ರದುರ್ಗ, ಮಾ 09: ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರೊಂದು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರು ನಗರ ಮೂಲದವರಾಗಿದ್ದಾರೆ. ಘಟನೆಯಲ್ಲಿ ರುದ್ರಸ್ವಾಮಿ (60), ಮಲ್ಲಿಕಾರ್ಜುನ (50), ಶಾಂತಮೂರ್ತಿ (55) ಹಾಗೂ ಚಿದಂಬರಾಚಾರ್ (52) ಹಾಗೂ ಮತ್ತೋರ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ''ಮೃತರೆಲ್ಲರೂ ಬೆಂಗಳೂರು ಮೂಲದವರಾಗಿದ್ದು, ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಘಟನೆ ಸಂಭವಿಸಿದೆ. ಘಟನೆಗೆ ಮೂಲ ಕಾರಣ ಏನೆಂದು ಪರಿಶೀಲಿಸಿದಾಗ, ಇನ್ನೋವಾ ಕಾರು ಚಾಲಕನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದು ಬಂದಿದೆ'' ಎಂದು ಮಾಹಿತಿ ನೀಡಿದರು
''ಮೃತರೆಲ್ಲರೂ ಬೆಳಗಾವಿಯ ಸವದತ್ತಿ ದೇವಸ್ಥಾನಕ್ಕೆ ಹೋಗಿದ್ದರು ಎಂಬ ಮಾಹಿತಿ ಸಿಕ್ಕಿದೆ. ಅವರು ಸಂಚರಿಸುತ್ತಿದ್ದ ಕಾರಿನಲ್ಲಿ ಸವದತ್ತಿ ಯಲ್ಲಮ್ಮ ದೇವಾಲಯದ ಪ್ರಸಾದ ಕಂಡುಬಂದಿದೆ. ಹೀಗಾಗಿ, ದೇವಸ್ಥಾನಕ್ಕೆ ಹೋಗಿರುವ ಸಾಧ್ಯತೆ ಇದೆ. ಘಟನೆ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ'' ಎಂದು ಎಸ್ಪಿ ತಿಳಿಸಿದರು.
Five people were killed in a head-on collision between a car and a truck on the outskirts of the district headquarter town of Chitradurga on Sunday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm