ಬ್ರೇಕಿಂಗ್ ನ್ಯೂಸ್
09-03-25 09:51 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.9 : ಜಗತ್ತು ಹಲವು ರೀತಿಯ ವಿಸ್ಮಯಗಳಿಗೆ ಸಾಕ್ಷಿಯಾಗಿದ್ದಿದೆ. ಪ್ರತಿ ಬಾರಿಯೂ ಜನರೂ ಅಷ್ಟೇ ಅಚ್ಚರಿ ಪಟ್ಟುಕೊಂಡದ್ದೂ ಇದೆ. ಕರು ಹಾಕಿದ ಕೂಡಲೇ ಹಸು ಹಾಲು ನೀಡುವುದನ್ನು ನಾವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಂದು ಕರು ಜನಿಸಿದ ಮೂರೇ ದಿನದಲ್ಲಿ ತನ್ನ ಕೆಚ್ಚಲಿನಿಂದ ಹಾಲು ಇಳಿಸಿದೆ. ಹಾಲು ಕುಡಿಯುವುದಕ್ಕೇ ಪರದಾಡಬೇಕಾದ ಹೊತ್ತಿನಲ್ಲಿ ರೈತ ಹಾಲು ಕರೆಯುವಾಗ ಸ್ವತಃ ಹಾಲು ಇಳಿಸಿ ಜನರನ್ನು ಅಚ್ಚರಿಗೊಳಿಸಿದೆ.
ಹೀಗಾಗಿ, ಇದೇನೋ ಪವಾಡ ಘಟಿಸಿದೆ ಎಂದು ಸ್ಥಳೀಯರು ಕರುವಿಗೆ ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿದ್ದಾರೆ. ಇದೇ ವೇಳೆ, ಈ ವಿಶಿಷ್ಟ ಕರುವನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ. ಚಿತ್ರದುರ್ಗ ತಾಲೂಕಿನ ಅನ್ನೇಹಾಳ ಗ್ರಾಮದಲ್ಲಿ ಇಂಥದ್ದೊಂದು ಪವಾಡ ನಡೆದಿದ್ದು ಅಚ್ಚರಿ ಸೃಷ್ಟಿಸಿದೆ. ಅನ್ನೇಹಾಳ ಗ್ರಾಮದ ನಿರಂಜನ ಮೂರ್ತಿ ಎಂಬವರ ಮನೆಯಲ್ಲಿ ಡೈರಿ ಹಸು ಮರಿ ಹಾಕಿದ್ದು ಆ ಕರು ಜನಿಸಿದ ಮೂರೇ ದಿನಕ್ಕೆ ಹಾಲು ಕೊಡಲು ಪ್ರಾರಂಭಿಸಿದೆ. ಕರುವಿನ ಕೆಚ್ಚಲಿನಿಂದ ಹಾಲು ಸುರಿಯುತ್ತಿದ್ದುದನ್ನ ಕಂಡ ನಿರಂಜನ ಮೂರ್ತಿ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ತಾಯಿ ಹಸುವಿನ ಹಾಲು ಕುಡಿದು ಸುತ್ತಾಡಿಕೊಂಡಿರಬೇಕಾದ ಕರು 31 ದಿನಗಳಿಂದ ಸ್ವತಃ ಹಾಲು ಕೊಡ್ತಿರೋದು ಅಚ್ಚರಿಗೆ ಕಾರಣವಾಗಿದೆ.




ನಿರಂಜನ ಮೂರ್ತಿ 6 ತಿಂಗಳ ಹಿಂದೆ ಹಸು ಖರೀದಿಸಿದ್ದರು. ಈಗಾಗಲೇ ಆ ಹಸು ಮೂರು ಹೆಣ್ಣು ಕರುಗಳಿಗೆ ಜನ್ಮ ನೀಡಿದೆ. ಆದ್ರೆ ಆ ಎರಡೂ ಹೆಣ್ಣು ಕರುಗಳು ಸಹಜವಾಗಿದ್ದವು. ಆದ್ರೆ ಈ ಮೂರನೇಯದ್ದು ಮಾತ್ರ ಕಾಮಧೇನುವಿನಂತೆ ಹುಟ್ಟಿದ ಮೂರೇ ದಿನಕ್ಕೆ ಹಾಲು ನೀಡುತ್ತಿದೆ. ದಿನಕ್ಕೆ ಅರ್ಧ ಲೀಟರ್ಗೂ ಹೆಚ್ಚು ಹಾಲು ಕರೆಯುವ ಕರುವನ್ನು ಗ್ರಾಮಸ್ಥರು ಕಾಮಧೇನು ಅಂತ ಪೂಜೆ ಮಾಡುತ್ತಿದ್ದಾರೆ.
ಹಸು ಗರ್ಭ ಧರಿಸಿ ಕರು ಹಾಕಿದರೆ ಮಾತ್ರ ಹಾಲು ನೀಡುತ್ತವೆ. ಅದರಲ್ಲೂ ಕರುವನ್ನೇ ಮೊದಲು ಜಗಿಯುವಂತೆ ಮಾಡಿ ಕೆಚ್ಚಲಿನಲ್ಲಿ ಹಾಲು ಇಳಿಸಬೇಕಾದ ಪದ್ಧತಿ ಇದೆ. ಈಗೆಲ್ಲ ಹೈಬ್ರೀಡ್ ದನಗಳು ಬಂದಿದ್ದು ಹಾಲಿನ ಉದ್ದೇಶಕ್ಕಾಗಿಯೇ ಸಾಕುತ್ತಾರೆ. ಆದರೆ, ಇದ್ಯಾವುದೂ ಇಲ್ಲದೆ ಕರುವೊಂದು ಹಾಲು ಕೊಡುವುದು ಜಗದ ಸೋಜಿಗಕ್ಕೆ ಸಾಕ್ಷಿಯಾಗಿದೆ.
A calf has begun producing milk just three days after its birth, captivating the hearts and minds of residents in Chitradurga. The miraculous occurrence has drawn crowds of curious locals eager to witness this extraordinary phenomenon.
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 11:36 am
HK News Desk
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm