ಬ್ರೇಕಿಂಗ್ ನ್ಯೂಸ್
09-03-25 09:51 pm HK News Desk ಕರ್ನಾಟಕ
ಚಿತ್ರದುರ್ಗ, ಮಾ.9 : ಜಗತ್ತು ಹಲವು ರೀತಿಯ ವಿಸ್ಮಯಗಳಿಗೆ ಸಾಕ್ಷಿಯಾಗಿದ್ದಿದೆ. ಪ್ರತಿ ಬಾರಿಯೂ ಜನರೂ ಅಷ್ಟೇ ಅಚ್ಚರಿ ಪಟ್ಟುಕೊಂಡದ್ದೂ ಇದೆ. ಕರು ಹಾಕಿದ ಕೂಡಲೇ ಹಸು ಹಾಲು ನೀಡುವುದನ್ನು ನಾವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಂದು ಕರು ಜನಿಸಿದ ಮೂರೇ ದಿನದಲ್ಲಿ ತನ್ನ ಕೆಚ್ಚಲಿನಿಂದ ಹಾಲು ಇಳಿಸಿದೆ. ಹಾಲು ಕುಡಿಯುವುದಕ್ಕೇ ಪರದಾಡಬೇಕಾದ ಹೊತ್ತಿನಲ್ಲಿ ರೈತ ಹಾಲು ಕರೆಯುವಾಗ ಸ್ವತಃ ಹಾಲು ಇಳಿಸಿ ಜನರನ್ನು ಅಚ್ಚರಿಗೊಳಿಸಿದೆ.
ಹೀಗಾಗಿ, ಇದೇನೋ ಪವಾಡ ಘಟಿಸಿದೆ ಎಂದು ಸ್ಥಳೀಯರು ಕರುವಿಗೆ ಶ್ರದ್ಧಾ ಭಕ್ತಿಯಿಂದ ಪೂಜೆ ಮಾಡಿದ್ದಾರೆ. ಇದೇ ವೇಳೆ, ಈ ವಿಶಿಷ್ಟ ಕರುವನ್ನು ನೋಡಲು ಜನ ಮುಗಿಬೀಳುತ್ತಿದ್ದಾರೆ. ಚಿತ್ರದುರ್ಗ ತಾಲೂಕಿನ ಅನ್ನೇಹಾಳ ಗ್ರಾಮದಲ್ಲಿ ಇಂಥದ್ದೊಂದು ಪವಾಡ ನಡೆದಿದ್ದು ಅಚ್ಚರಿ ಸೃಷ್ಟಿಸಿದೆ. ಅನ್ನೇಹಾಳ ಗ್ರಾಮದ ನಿರಂಜನ ಮೂರ್ತಿ ಎಂಬವರ ಮನೆಯಲ್ಲಿ ಡೈರಿ ಹಸು ಮರಿ ಹಾಕಿದ್ದು ಆ ಕರು ಜನಿಸಿದ ಮೂರೇ ದಿನಕ್ಕೆ ಹಾಲು ಕೊಡಲು ಪ್ರಾರಂಭಿಸಿದೆ. ಕರುವಿನ ಕೆಚ್ಚಲಿನಿಂದ ಹಾಲು ಸುರಿಯುತ್ತಿದ್ದುದನ್ನ ಕಂಡ ನಿರಂಜನ ಮೂರ್ತಿ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ತಾಯಿ ಹಸುವಿನ ಹಾಲು ಕುಡಿದು ಸುತ್ತಾಡಿಕೊಂಡಿರಬೇಕಾದ ಕರು 31 ದಿನಗಳಿಂದ ಸ್ವತಃ ಹಾಲು ಕೊಡ್ತಿರೋದು ಅಚ್ಚರಿಗೆ ಕಾರಣವಾಗಿದೆ.




ನಿರಂಜನ ಮೂರ್ತಿ 6 ತಿಂಗಳ ಹಿಂದೆ ಹಸು ಖರೀದಿಸಿದ್ದರು. ಈಗಾಗಲೇ ಆ ಹಸು ಮೂರು ಹೆಣ್ಣು ಕರುಗಳಿಗೆ ಜನ್ಮ ನೀಡಿದೆ. ಆದ್ರೆ ಆ ಎರಡೂ ಹೆಣ್ಣು ಕರುಗಳು ಸಹಜವಾಗಿದ್ದವು. ಆದ್ರೆ ಈ ಮೂರನೇಯದ್ದು ಮಾತ್ರ ಕಾಮಧೇನುವಿನಂತೆ ಹುಟ್ಟಿದ ಮೂರೇ ದಿನಕ್ಕೆ ಹಾಲು ನೀಡುತ್ತಿದೆ. ದಿನಕ್ಕೆ ಅರ್ಧ ಲೀಟರ್ಗೂ ಹೆಚ್ಚು ಹಾಲು ಕರೆಯುವ ಕರುವನ್ನು ಗ್ರಾಮಸ್ಥರು ಕಾಮಧೇನು ಅಂತ ಪೂಜೆ ಮಾಡುತ್ತಿದ್ದಾರೆ.
ಹಸು ಗರ್ಭ ಧರಿಸಿ ಕರು ಹಾಕಿದರೆ ಮಾತ್ರ ಹಾಲು ನೀಡುತ್ತವೆ. ಅದರಲ್ಲೂ ಕರುವನ್ನೇ ಮೊದಲು ಜಗಿಯುವಂತೆ ಮಾಡಿ ಕೆಚ್ಚಲಿನಲ್ಲಿ ಹಾಲು ಇಳಿಸಬೇಕಾದ ಪದ್ಧತಿ ಇದೆ. ಈಗೆಲ್ಲ ಹೈಬ್ರೀಡ್ ದನಗಳು ಬಂದಿದ್ದು ಹಾಲಿನ ಉದ್ದೇಶಕ್ಕಾಗಿಯೇ ಸಾಕುತ್ತಾರೆ. ಆದರೆ, ಇದ್ಯಾವುದೂ ಇಲ್ಲದೆ ಕರುವೊಂದು ಹಾಲು ಕೊಡುವುದು ಜಗದ ಸೋಜಿಗಕ್ಕೆ ಸಾಕ್ಷಿಯಾಗಿದೆ.
A calf has begun producing milk just three days after its birth, captivating the hearts and minds of residents in Chitradurga. The miraculous occurrence has drawn crowds of curious locals eager to witness this extraordinary phenomenon.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm