ಬ್ರೇಕಿಂಗ್ ನ್ಯೂಸ್
11-03-25 02:27 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.11 : ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧಿಸಿ ರಾಜ್ಯ ಸರ್ಕಾರ ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ ನಡೆಸಲು ಆದೇಶ ಹೊರಡಿಸಿದೆ. ಇದಲ್ಲದೆ, ಐಜಿಪಿ ಅಧಿಕಾರಿಯ ಪ್ರೋಟೊಕಾಲ್ ದುರುಪಯೋಗ ಆಗಿದೆಯೆಂಬ ಆರೋಪದ ಬಗ್ಗೆ ಸಿಐಡಿ ತನಿಖೆಗೆ ಆದೇಶ ಮಾಡಲಾಗಿದೆ. ಇದರಿಂದಾಗಿ ಐಜಿಪಿ ರಾಮಚಂದ್ರ ರಾವ್ಗೆ ಸಂಕಷ್ಟ ಶುರುವಾಗಿದೆ.
ರಾಮಚಂದ್ರರಾವ್ಗೆ ಕೊಟ್ಟಿದ್ದ ಪ್ರೋಟೋಕಾಲ್ಗಳನ್ನು ದುರುಪಯೋಗ ಪಡಿಸಿಕೊಂಡು ವಿಮಾನ ನಿಲ್ದಾಣಗಳಲ್ಲಿ ಅಧಿಕಾರಿಗಳ ಕಣ್ತಪ್ಪಿಸಿ ಅಕ್ರಮ ಅಪರಾಧ ಎಸಗಿರುವ ಆರೋಪ ಇದೆ. ಹೀಗಾಗಿ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿರುವ ರಾಮಚಂದ್ರ ರಾವ್ ಅವರನ್ನು ತನಿಖೆ ನಡೆಸುವುದು ಅಗತ್ಯವೆಂದು ಸರ್ಕಾರ ಪರಿಗಣಿಸಿದೆ. ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ಮತ್ತು ನೆರವನ್ನು ನೀಡಲು ಡಿಜಿಪಿ ಅಲೋಕ್ ಮೋಹನ್ಗೆ ಸೂಚನೆ ನೀಡಲಾಗಿದ್ದು, ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ಇದಲ್ಲದೆ, ಪ್ರೋಟೋಕಾಲ್ ಉಲ್ಲಂಘನೆಯಲ್ಲಿ ಪೊಲೀಸ್ ಸಿಬ್ಬಂದಿ ಭಾಗಿಯಾಗಿರುವ ಬಗ್ಗೆ ಸಿಐಡಿ ತನಿಖೆ ನಡೆಸಲಿದೆ. ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳಿಗೆ ಇದರಿಂದ ಸಂಕಷ್ಟ ಎದುರಾಗಿದೆ. ಓರ್ವ ಪ್ರೋಟೋಕಾಲ್ನ ಹೆಡ್ ಕಾನ್ಸ್ಟೇಬಲ್, ಇನ್ನೊಬ್ಬ ಗುಪ್ತಚರ ಇಲಾಖೆ ಕಾನ್ಸ್ಟೇಬಲ್ ಆಗಿದ್ದು ಇವರೀಗ ತನಿಖೆ ಎದುರಿಸಬೇಕಾಗಿದೆ. ರನ್ಯಾ ರಾವ್ ಏರ್ಪೋರ್ಟ್ಗೆ ಬಂದಾಗಲೆಲ್ಲ ಪಾಳಿಯಲ್ಲಿ ಈ ಇಬ್ಬರೂ ಇರುತ್ತಿದ್ದರು ಎನ್ನಲಾಗಿದೆ.
ಇದೇ ವೇಳೆ, ರನ್ಯಾ ರಾವ್ ಗೆಳೆಯನಾಗಿರುವ ಬೆಂಗಳೂರಿನ ಸ್ಟಾರ್ ಹೊಟೇಲ್ ಮಾಲಕರ ಪುತ್ರ ತರುಣ್ ರಾಜ್ನನ್ನು ಡಿಆರ್ಐ ಅಧಿಕಾರಿಗಳು ಬಂಧಿಸಿದ್ದಾರೆ. ದುಬೈನಲ್ಲಿ ರನ್ಯಾ ಜೊತೆ ತರುಣ್ ರಾಜ್ ಸ್ನೇಹದಲ್ಲಿದ್ದ ಬಗ್ಗೆ ಡಿಆರ್ಐಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಗೋಲ್ಡ್ ಸ್ಮಗ್ಲಿಂಗ್ ಬಗ್ಗೆ ತರುಣ್ರಾಜ್ನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಕಳೆದ ಎರಡು ದಿನಗಳಿಂದ ತರುಣ್ ರಾಜ್ಗೆ ಫುಲ್ ಡ್ರಿಲ್ ಮಾಡಿದ್ದಾರೆ. ಇದಲ್ಲದೆ, ಕೋರ್ಟಿನಲ್ಲಿ ಹಾಜರುಪಡಿಸಿ ಐದು ದಿನಗಳ ಕಾಲ ಕಸ್ಟಡಿ ಪಡೆದಿದ್ದಾರೆ.
Slammed by political detractors for turning a blind eye to the gold smuggling racket busted by Director of Revenue Intelligence (DRI) sleuths, home minister G Parameshwara Monday said the state govt will initiate a probe into the alleged misuse of police protocol services at Kempegowda International Airport (KIA).
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm