ಬ್ರೇಕಿಂಗ್ ನ್ಯೂಸ್
15-03-25 09:18 pm HK News Desk ಕರ್ನಾಟಕ
ಕೊಪ್ಪಳ, ಮಾ.15 : ಕನಕಗಿರಿ ಕ್ಷೇತ್ರದ ಮಾಜಿ ಶಾಸಕ, ಹಾಲಿ ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಡೇಸೂಗೂರು ಸರ್ಕಾರದ ಮಹಿಳಾ ಅಧಿಕಾರಿಯನ್ನು ಎರಡನೇ ಮದುವೆಯಾಗಿದ್ದಾರೆಯೇ ಎಂಬ ಗುಸು ಗುಸು ಜಿಲ್ಲೆಯಲ್ಲಿ ಹಬ್ಬಿದೆ.
ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಭೇಟಿ ಕೊಟ್ಟಾಗ ಅಲ್ಲಿದ್ದ ಉಪ ನಿರ್ದೇಶಕಿ ಶ್ವೇತಾ ಅವರನ್ನು ನಿನ್ನ ಗಂಡ ಯಾರಮ್ಮಾ.. ಏನ್ ಮಾಡ್ತಾರೆ ಅವರು ಅಂತ ಪ್ರಶ್ನೆ ಮಾಡಿದ್ದಾರೆ. ಈ ವೇಳೆ, ನನ್ನ ಪತಿ Politician, ಕನಕಗಿರಿಯ ಮಾಜಿ ಶಾಸಕರು, ಬಸವರಾಜ್ ದಡೆಸೂಗೂರ್ ಅಂತ ಒಪ್ಪಿಕೊಂಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಮಾಧ್ಯಮದವರ ಎದುರಲ್ಲೇ ಈ ರೀತಿ ಉತ್ತರ ಕೊಟ್ಟಿದ್ದು ಮಾಜಿ ಶಾಸಕ ದಡೇಸುಗೂರು ಮತ್ತೊಂದು ಮದುವೆಯಾಗಿದ್ದಾರೆಯೇ ಎಂಬ ವದಂತಿ ಹಬ್ಬುವಂತಾಗಿದೆ.


ಈ ಹಿಂದೆ ದಡೇಸೂಗೂರ್ ಶಾಸಕರಾಗಿದ್ದ ವೇಳೆ ಈ ಮಹಿಳಾ ಅಧಿಕಾರಿಯ ಜೊತೆಗಿನ ಮಾತುಗಳ ಆಡಿಯೋ ವೈರಲ್ ಆಗಿತ್ತು. ಇದರಿಂದ ಇವರ ನಡುವಿನ ಸಂಬಂಧ ಬಗ್ಗೆ ಗುಸು ಗುಸು ಹರಡಿತ್ತು. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಯೇ ತನ್ನ ಗಂಡ ಮಾಜಿ ಶಾಸಕರು ಅಂತ ಹೇಳಿಕೊಂಡಿದ್ದಾರೆ.
ಹೊಸಪೇಟೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಉಪ ಲೋಕಾಯುಕ್ತ ಭೇಟಿ ನೀಡಿದಾಗ ಈ ಘಟನೆ ನಡೆದಿದೆ. ಬಸವರಾಜ ದಡೇಸೂಗೂರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದು ಸದ್ಯ ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿದ್ದಾರೆ.
A woman officer has made a startling disclosure that she is married to BJP former #MLA from #Kanakagiri, #BasavarajDadesugur, who is currently the #Koppal district president of the party. This has now led to speculation that the BJP leader may have married a second time secretly. pic.twitter.com/CsOlejfj6T
— Headline Karnataka (@hknewsonline) March 15, 2025
A woman officer has made a startling disclosure that she is married to BJP former MLA from Kanakagiri, Basavaraj Dadesugur, who is currently the Koppal district president of the party. This has now led to speculation that the BJP leader may have married a second time secretly.
23-02-26 12:35 pm
HK News Desk
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
23-02-26 12:19 pm
Mangalore Correspondent
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
23-02-26 11:36 am
HK News Desk
ಶಿವಮೊಗ್ಗದಿಂದ ಕೇರಳಕ್ಕೆ ಗೋಸಾಗಣೆ ; ಮಂಗಳೂರಿನಲ್ಲಿ...
22-02-26 10:43 pm
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm