ಬ್ರೇಕಿಂಗ್ ನ್ಯೂಸ್
18-03-25 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಸುದ್ದಗುಂಟೆಪಾಳ್ಯ ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ವಾಹನ ಹಿಮ್ಮುಖವಾಗಿ ಚಲಿಸುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದ ವಿದ್ಯುತ್ ಕಂಬ ಮುರಿದು ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಓರ್ವ ಮಹಿಳೆ ನಾಲ್ಕು ತಿಂಗಳ ಗರ್ಭಿಣಿ:
ಬಿಹಾರದ ಸೋನಿ ಕುಮಾರಿ ಕಳೆದ ಎಂಟು ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸದ್ಯ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಸುಮತಿ, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರೂ ಮಹಿಳೆಯರು ಸೋಮವಾರ ಸಂಜೆ ತಮ್ಮ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್ ಕಿವಿಗೆ ಹೆಡ್ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
JCB Driver Rams Into Electric Pole, Two killed Including Pregnant Woman in Bangalore at Sadduguntepalya.
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm