ಬ್ರೇಕಿಂಗ್ ನ್ಯೂಸ್
18-03-25 02:30 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೈಯ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸುದ್ದಗುಂಟೆಪಾಳ್ಯ ನಿವಾಸಿಗಳಾದ ಸುಮತಿ (35) ಹಾಗೂ ಸೋನಿ ಕುಮಾರಿ (35) ಮೃತಪಟ್ಟಿದ್ದಾರೆ. ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
ಸುದ್ದಗುಂಟೆಪಾಳ್ಯ ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ನಡೆಯುತ್ತಿದ್ದಾಗ ಜೆಸಿಬಿ ವಾಹನ ಹಿಮ್ಮುಖವಾಗಿ ಚಲಿಸುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಇದರಿಂದ ವಿದ್ಯುತ್ ಕಂಬ ಮುರಿದು ನಡೆದು ಬರುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಓರ್ವ ಮಹಿಳೆ ನಾಲ್ಕು ತಿಂಗಳ ಗರ್ಭಿಣಿ:
ಬಿಹಾರದ ಸೋನಿ ಕುಮಾರಿ ಕಳೆದ ಎಂಟು ವರ್ಷಗಳಿಂದ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಸದ್ಯ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಎಂದು ತಿಳಿದು ಬಂದಿದೆ. ತಮಿಳುನಾಡಿನ ಸುಮತಿ, ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ಸುದ್ದಗುಂಟೆಪಾಳ್ಯದಲ್ಲಿ ನೆಲೆಸಿದ್ದರು. ಇಬ್ಬರೂ ಮಹಿಳೆಯರು ಸೋಮವಾರ ಸಂಜೆ ತಮ್ಮ ಮಕ್ಕಳನ್ನು ಟ್ಯೂಷನ್ನಿಂದ ಕರೆದುಕೊಂಡು ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ರಸ್ತೆ ಕಾಮಗಾರಿಯ ವೇಳೆ ಜೆಸಿಬಿ ಡ್ರೈವರ್ ಕಿವಿಗೆ ಹೆಡ್ಫೋನ್ ಹಾಕಿಕೊಂಡು ಕೆಲಸ ಮಾಡುತ್ತಿದ್ದ. ಈ ವೇಳೆ ಲೈಟ್ ಕಂಬದಿಂದ ಮನೆಗೆ ಬೇರೆ ಕಡೆಗೆ ಕನೆಕ್ಟ್ ಮಾಡಿದ್ದ ವೈಯರ್ಗೆ ಜೆಸಿಬಿಯ ಮುಂಭಾಗ ಟಚ್ ಆಗಿದೆ. ಜನ ಜೋರಾಗಿ ಕೂಗಿಕೊಂಡರೂ ಡ್ರೈವರ್ ಕೇಳಿಸಿಕೊಳ್ಳದೇ ವೈಯರ್ ಎಳೆದಿರುವುದೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಜೆಸಿಬಿ ಯಂತ್ರವನ್ನು ಜಪ್ತಿ ಮಾಡಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಬೈಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
JCB Driver Rams Into Electric Pole, Two killed Including Pregnant Woman in Bangalore at Sadduguntepalya.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm