ಬ್ರೇಕಿಂಗ್ ನ್ಯೂಸ್
18-03-25 11:02 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18 : ಗಡಿಭಾಗದಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು, ಖಾಸಗಿ ಕ್ಷೇತ್ರಗಳಲ್ಲು ಕನ್ನಡಿಗರಿಗೆ ಉದ್ಯೋಗ ನೀಡಬೇಕು, ಕನ್ನಡಿಗರ ಮೇಲೆ ಪರಭಾಷಿಕರ ದಾಳಿ ನಿಲ್ಲಿಸ ಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಆಗ್ರಹಿಸಿ ಇದೇ ಮಾ.22ರಂದು ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಕರ್ನಾಟಕ ಬಂದ್ಗೆ ಸಂಬಂಧಿಸಿ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಸಭೆ ನಡೆಸಿದ್ದು ಹಲವು ಕನ್ನಡಪರ ಸಂಘಟನೆಯ ಮುಖಂಡರು ಪಾಲ್ಗೊಂಡಿದ್ದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಾಟಾಳ್ ನಾಗರಾಜ್, ಅಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ವರೆಗೂ ಕರ್ನಾಟಕ ಬಂದ್ ನಡೆಸಲಾಗುವುದು. ಬೆಳಗ್ಗೆ 10:30ಕ್ಕೆ ಟೌನ್ ಹಾಲ್ನಿಂದ ಫ್ರೀಡಂ ಪಾರ್ಕ್ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ಬಂದ್ ಹಿಂಪಡೆಯುವುದಿಲ್ಲ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಪದೇ ಪದೇ ಹಲ್ಲೆ ನಡೆಯುತ್ತಿದೆ. ಈ ಬಂದ್ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಿರ್ಧರಿಸಲಾಗಿದೆ. ಬಹುತೇಕ ಕನ್ನಡ ಪರ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿವೆ. ಆಟೋ ಚಾಲಕರ ಸಂಘಟನೆಗಳು, ಕ್ಯಾಬ್, ಒಲಾ, ಉಬರ್, ಹೋಟೆಲ್ ಮಾಲೀಕರು ಸೇರಿ ಎಲ್ಲರೂ ಬಂದ್ಗೆ ಬೆಂಬಲ ನೀಡಬೇಕು. ನಮ್ಮ ಮೆಟ್ರೋ, ಮಾಲ್ಗಳೂ ಬಂದ್ ಆಗಬೇಕು. ಇಲ್ಲದಿದ್ದರೇ ನಾವೇ ಬಂದ್ ಮಾಡಿಸುತ್ತೇವೆ ಎಂದು ಎಚ್ಚರಿಕೆ ನೀಡಿದರಲ್ಲದೇ ಕರ್ನಾಟಕ ಬಂದ್ಗೆ ನಮ್ಮದು ನೈತಿಕ ಬೆಂಬಲ ಅನ್ನುವವರು ಮನೆಯಲ್ಲೇ ಕುಳಿತುಕೊಳ್ಳಿ ಎಂದು ಹೇಳಿದರು.
ರಾಜ್ಯದಲ್ಲಿ ದಿನೇ ದಿನೇ ಕನ್ನಡಿಗರ ಮೇಲೆ ಪರಭಾಷಿಗರ ದಾಳಿ ಹೆಚ್ಚಾಗುತ್ತಿದೆ. ಬೆಂಗಳೂರು, ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಯುತ್ತಿದೆ. ಬಿಹಾರ, ಬಂಗಾಳ, ತಮಿಳು, ತೆಲುಗು, ಮಾರ್ವಾಡಿಯವರು ರಾಜ್ಯದಲ್ಲಿ ಸುಮಾರು 2 ಕೋಟಿ ಜನ ಇದ್ದಾರೆ. ತಲೆಬೋಳಿಸೋದ್ರಿಂದ ಹಿಡಿದು ಪಾನಿಪುರಿ ಮಾರೋನು ಕೂಡ ಅನ್ಯ ರಾಜ್ಯದವರಿದ್ದಾರೆ. ಇದನ್ನೆಲ್ಲ ಯಾರು ಕೇಳೋದು? ಇದೆಲ್ಲದರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಅಲ್ಲದೇ ಎಂಇಎಸ್, ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು. ಬೆಳಗಾವಿ ನಮ್ಮದು. ಬೆಳಗಾವಿಯಲ್ಲಿ ಶಿವಾಜಿ, ಸಂಭಾಜಿ ಪ್ರತಿಮೆ ಬೇಕಾ? ಪರಭಾಷಿಗರು ಕನ್ನಡಿಗರ ಮೇಲೆ ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಕರ್ನಾಟಕದಲ್ಲಿದ್ದು ಕನ್ನಡಿಗರ ಮೇಲೆ ಹಲ್ಲೆ ನಡೆಸುವವರು ರಾಜ್ಯ ಬಿಟ್ಟು ಹೋಗಬೇಕು ಎಂದು ಆಗ್ರಹಿಸಿದರು.
Pro-Kannada organisations have called for a Karnataka bandh on March 22 to protest the recent assault on a bus crew and the "brazen violence" by pro-Marathi activists
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm