ಬ್ರೇಕಿಂಗ್ ನ್ಯೂಸ್
18-12-20 01:19 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ಕೊರೊನಾ ಸೋಂಕಿನ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳನ್ನು ಹೊಸ ವರ್ಷಕ್ಕೆ ಆರಂಭಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಈಗಾಗ್ಲೇ ಪ್ರಾಥಮಿಕ ಶಾಲೆಗಳ ವಿದ್ಯಾಗಮ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿರುವ ಶಿಕ್ಷಣ ಇಲಾಖೆ, ಜ.1ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.
ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವುದು ಮತ್ತು 2ನೇ ಅಲೆಯ ತೀವ್ರತೆ ಕಡಿಮೆ ಇರುವ ಕಾರಣ ಬೋರ್ಡ್ ಪರೀಕ್ಷೆ ಇರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಜನವರಿ ಆರಂಭದಲ್ಲಿಯೇ ಆರಂಭಿಸಲು ಶಿಕ್ಷಣ ಇಲಾಖೆಗೆ ಕೊರೊನಾ ಸಲಹಾ ಮಂಡಳಿ ಸರಕಾರಕ್ಕೆ ವರದಿ ನೀಡಿದೆ. ಅಲ್ಲದೆ, 15 ದಿನಗಳ ಬಳಿಕ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನೂ ಆರಂಭಿಸುವಂತೆ ಸಲಹೆ ಮಾಡಿದೆ. ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಒಪ್ಪಿಗೆ ನೀಡಿದ್ದು ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.


ಕೊರೊನಾ ತಾಂತ್ರಿಕ ಮತ್ತು ಸಲಹಾ ಸಮಿತಿ ತಜ್ಞರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸುರೇಶ್ ಕುಮಾರ್ ಸಭೆ ನಡೆಸಿದ್ದು, ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ, ಮರಣದ ಪ್ರಮಾಣ, ಹರಡುವಿಕೆ ಇತ್ಯಾದಿ ವಿಷಯಗಳ ಬಗ್ಗೆ ಸಚಿವರು ವರದಿ ತರಿಸಿಕೊಂಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ದೃಷ್ಟಿಯಿಂದ ಶೀಘ್ರದಲ್ಲೇ ಶಾಲೆ ಆರಂಭಿಸುವುದು ಸೂಕ್ತ ಎಂದು ಅಧಿಕಾರಿಗಳು ಅಭಿಪ್ರಾಯ ನೀಡಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ 1ರಿಂದ 5ನೇ ತರಗತಿ ವರೆಗಿನ ಮಕ್ಕಳಿಗೆ ವಿದ್ಯಾಗಮ ನಡೆಸುವುದು ಬೇಡ ಎಂದು ತಜ್ಞರು ವರದಿ ನೀಡಿದ್ದಾರೆ. 6ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ನಡೆಸುವುದು ಉತ್ತಮ ಎಂದು ಸಲಹೆ ಮಾಡಿದ್ದಾರೆ.
The Karnataka Education Department is making its preparations to commence SSLC and PUC in 2021 which was halted after coronavirus lockdown.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm