ಬ್ರೇಕಿಂಗ್ ನ್ಯೂಸ್
18-12-20 01:19 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ಕೊರೊನಾ ಸೋಂಕಿನ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳನ್ನು ಹೊಸ ವರ್ಷಕ್ಕೆ ಆರಂಭಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಈಗಾಗ್ಲೇ ಪ್ರಾಥಮಿಕ ಶಾಲೆಗಳ ವಿದ್ಯಾಗಮ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿರುವ ಶಿಕ್ಷಣ ಇಲಾಖೆ, ಜ.1ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.
ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವುದು ಮತ್ತು 2ನೇ ಅಲೆಯ ತೀವ್ರತೆ ಕಡಿಮೆ ಇರುವ ಕಾರಣ ಬೋರ್ಡ್ ಪರೀಕ್ಷೆ ಇರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಜನವರಿ ಆರಂಭದಲ್ಲಿಯೇ ಆರಂಭಿಸಲು ಶಿಕ್ಷಣ ಇಲಾಖೆಗೆ ಕೊರೊನಾ ಸಲಹಾ ಮಂಡಳಿ ಸರಕಾರಕ್ಕೆ ವರದಿ ನೀಡಿದೆ. ಅಲ್ಲದೆ, 15 ದಿನಗಳ ಬಳಿಕ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನೂ ಆರಂಭಿಸುವಂತೆ ಸಲಹೆ ಮಾಡಿದೆ. ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಒಪ್ಪಿಗೆ ನೀಡಿದ್ದು ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.


ಕೊರೊನಾ ತಾಂತ್ರಿಕ ಮತ್ತು ಸಲಹಾ ಸಮಿತಿ ತಜ್ಞರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸುರೇಶ್ ಕುಮಾರ್ ಸಭೆ ನಡೆಸಿದ್ದು, ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ, ಮರಣದ ಪ್ರಮಾಣ, ಹರಡುವಿಕೆ ಇತ್ಯಾದಿ ವಿಷಯಗಳ ಬಗ್ಗೆ ಸಚಿವರು ವರದಿ ತರಿಸಿಕೊಂಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ದೃಷ್ಟಿಯಿಂದ ಶೀಘ್ರದಲ್ಲೇ ಶಾಲೆ ಆರಂಭಿಸುವುದು ಸೂಕ್ತ ಎಂದು ಅಧಿಕಾರಿಗಳು ಅಭಿಪ್ರಾಯ ನೀಡಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ 1ರಿಂದ 5ನೇ ತರಗತಿ ವರೆಗಿನ ಮಕ್ಕಳಿಗೆ ವಿದ್ಯಾಗಮ ನಡೆಸುವುದು ಬೇಡ ಎಂದು ತಜ್ಞರು ವರದಿ ನೀಡಿದ್ದಾರೆ. 6ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ನಡೆಸುವುದು ಉತ್ತಮ ಎಂದು ಸಲಹೆ ಮಾಡಿದ್ದಾರೆ.
The Karnataka Education Department is making its preparations to commence SSLC and PUC in 2021 which was halted after coronavirus lockdown.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm