ಬ್ರೇಕಿಂಗ್ ನ್ಯೂಸ್
18-12-20 01:19 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.18: ಕೊರೊನಾ ಸೋಂಕಿನ ಕಾರಣದಿಂದ ಸ್ಥಗಿತಗೊಂಡಿರುವ ಶಾಲೆಗಳನ್ನು ಹೊಸ ವರ್ಷಕ್ಕೆ ಆರಂಭಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಈಗಾಗ್ಲೇ ಪ್ರಾಥಮಿಕ ಶಾಲೆಗಳ ವಿದ್ಯಾಗಮ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿರುವ ಶಿಕ್ಷಣ ಇಲಾಖೆ, ಜ.1ರಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಿದೆ.
ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವುದು ಮತ್ತು 2ನೇ ಅಲೆಯ ತೀವ್ರತೆ ಕಡಿಮೆ ಇರುವ ಕಾರಣ ಬೋರ್ಡ್ ಪರೀಕ್ಷೆ ಇರುವ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಜನವರಿ ಆರಂಭದಲ್ಲಿಯೇ ಆರಂಭಿಸಲು ಶಿಕ್ಷಣ ಇಲಾಖೆಗೆ ಕೊರೊನಾ ಸಲಹಾ ಮಂಡಳಿ ಸರಕಾರಕ್ಕೆ ವರದಿ ನೀಡಿದೆ. ಅಲ್ಲದೆ, 15 ದಿನಗಳ ಬಳಿಕ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನೂ ಆರಂಭಿಸುವಂತೆ ಸಲಹೆ ಮಾಡಿದೆ. ಇದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಒಪ್ಪಿಗೆ ನೀಡಿದ್ದು ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.


ಕೊರೊನಾ ತಾಂತ್ರಿಕ ಮತ್ತು ಸಲಹಾ ಸಮಿತಿ ತಜ್ಞರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸುರೇಶ್ ಕುಮಾರ್ ಸಭೆ ನಡೆಸಿದ್ದು, ಅಧಿಕಾರಿಗಳ ಅಭಿಪ್ರಾಯ ಪಡೆದಿದ್ದಾರೆ. ಕೊರೊನಾ ಸೋಂಕಿನ ಪ್ರಮಾಣ, ಮರಣದ ಪ್ರಮಾಣ, ಹರಡುವಿಕೆ ಇತ್ಯಾದಿ ವಿಷಯಗಳ ಬಗ್ಗೆ ಸಚಿವರು ವರದಿ ತರಿಸಿಕೊಂಡಿದ್ದಾರೆ. ಅಲ್ಲದೆ, ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ದೃಷ್ಟಿಯಿಂದ ಶೀಘ್ರದಲ್ಲೇ ಶಾಲೆ ಆರಂಭಿಸುವುದು ಸೂಕ್ತ ಎಂದು ಅಧಿಕಾರಿಗಳು ಅಭಿಪ್ರಾಯ ನೀಡಿದ್ದಾರೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ 1ರಿಂದ 5ನೇ ತರಗತಿ ವರೆಗಿನ ಮಕ್ಕಳಿಗೆ ವಿದ್ಯಾಗಮ ನಡೆಸುವುದು ಬೇಡ ಎಂದು ತಜ್ಞರು ವರದಿ ನೀಡಿದ್ದಾರೆ. 6ರಿಂದ 8ನೇ ತರಗತಿ ವರೆಗಿನ ಮಕ್ಕಳಿಗೆ ಸುರಕ್ಷತಾ ಕ್ರಮಗಳೊಂದಿಗೆ ವಿದ್ಯಾಗಮ ನಡೆಸುವುದು ಉತ್ತಮ ಎಂದು ಸಲಹೆ ಮಾಡಿದ್ದಾರೆ.
The Karnataka Education Department is making its preparations to commence SSLC and PUC in 2021 which was halted after coronavirus lockdown.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm