ಬ್ರೇಕಿಂಗ್ ನ್ಯೂಸ್
23-03-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23 : ಚಿನ್ನದ ರಿಕವರಿ ಹೆಸರಲ್ಲಿ ಚಿನ್ನದ ಗಟ್ಟಿ ಪಡೆದು ದುರ್ಬಳಕೆ ಮಾಡಿದ ಆರೋಪದಲ್ಲಿ ಪಿಎಸ್ಐ ಓರ್ವರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅಮಾನತಾಗಿದ್ದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸಂತೋಷ್ ಅವರು 2022ರಲ್ಲಿ ಹೊಸೂರು ಗೇಟ್ ಠಾಣೆ ಪಿಎಸ್ಐ ಆಗಿದ್ದಾಗ ಪ್ರಕರಣ ಒಂದರಲ್ಲಿ ರಿಕವರಿ ಮಾಡಿದ್ದ ಚಿನ್ನವನ್ನು ದುರ್ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಚಿನ್ನದ ಅಂಗಡಿ ಮಾಲೀಕರೊಬ್ಬರ ಬಳಿ ರಿಕವರಿ ಚಿನ್ನ ತೋರಿಸಬೇಕಿದೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಫೋಟೋ ತೆಗೆಸಿ ಹಿಂದಿರುಗಿಸುತ್ತೇನೆ ಎಂದು ಹೇಳಿ ಚಿನ್ನದ ಗಟ್ಟಿ ಪಡೆದು ಎಸ್ಕೇಪ್ ಆಗಿದ್ದರು. ಬಳಿಕ ಅಂಗಡಿ ಮಾಲೀಕ ಚಿನ್ನ ಕೇಳಿದಾಗ ಹಣ ಕೊಡುತ್ತೇನೆಂದು ಚೆಕ್ ಕೊಟ್ಟಿದ್ದರು. ಆದರೆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಚಿನ್ನದ ಅಂಗಡಿ ಮಾಲೀಕ ಕೇಳಿದಾಗ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ ಐ ಮೇಲೆ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪಿಎಸ್ ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.
ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ
ಈ ನಡುವೆ ಜಮೀನಿನ ಕರಾರು ಪತ್ರವನ್ನು ಚಿನ್ನದ ಅಂಗಡಿ ಮಾಲೀಕನಿಗೆ ಸಂತೋಷ್ ನೀಡಿದ್ದರು. ಆದರೆ ಆ ಜಾಗವನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಇದನ್ನು ಚಿನ್ನದ ಅಂಗಡಿ ಮಾಲೀಕ ಪ್ರಶ್ನಿಸಿದ ವೇಳೆ ಆತನಿಗೆ ಇನ್ಸ್ಪೆಕ್ಟರ್ ಸಂತೋಷ್ ಖಾಲಿ ಚೆಕ್ ನೀಡಿದ್ದರು. ನಂತರ, ಚೆಕ್ ಕೂಡ ಬೌನ್ಸ್ ಆಗಿತ್ತು. ಮತ್ತೆ ಹಣ ಅಥವಾ ಚಿನ್ನ ಕೇಳಿದಾಗ ಸಂತೋಷ್ ಅವರು ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಹಲಸೂರು ಗೇಟ್ ಠಾಣೆಯಲ್ಲಿ ಪಿಎಸ್ಐ ಸಂತೋಷ್ ವಿರುದ್ಧ ಅಧಿಕಾರ ದುರುಪಯೋಗ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು.
Bangalore 950 Grams of Gold Seized in Recovery Scam, Cottonpet Police station PSI Santosh Suspended Following FIR.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm