ಬ್ರೇಕಿಂಗ್ ನ್ಯೂಸ್
23-03-25 11:01 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23 : ಚಿನ್ನದ ರಿಕವರಿ ಹೆಸರಲ್ಲಿ ಚಿನ್ನದ ಗಟ್ಟಿ ಪಡೆದು ದುರ್ಬಳಕೆ ಮಾಡಿದ ಆರೋಪದಲ್ಲಿ ಪಿಎಸ್ಐ ಓರ್ವರನ್ನು ಅಮಾನತು ಮಾಡಿರುವ ಘಟನೆ ನಡೆದಿದೆ.
ಕಾಟನ್ ಪೇಟೆ ಠಾಣೆಯ ಪಿಎಸ್ಐ ಸಂತೋಷ್ ಅಮಾನತಾಗಿದ್ದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಸಂತೋಷ್ ಅವರು 2022ರಲ್ಲಿ ಹೊಸೂರು ಗೇಟ್ ಠಾಣೆ ಪಿಎಸ್ಐ ಆಗಿದ್ದಾಗ ಪ್ರಕರಣ ಒಂದರಲ್ಲಿ ರಿಕವರಿ ಮಾಡಿದ್ದ ಚಿನ್ನವನ್ನು ದುರ್ಬಳಕೆ ಮಾಡಿಕೊಂಡಿದ್ದರು ಎಂಬ ಆರೋಪ ಕೇಳಿಬಂದಿದೆ.
ಚಿನ್ನದ ಅಂಗಡಿ ಮಾಲೀಕರೊಬ್ಬರ ಬಳಿ ರಿಕವರಿ ಚಿನ್ನ ತೋರಿಸಬೇಕಿದೆ ಎಂದು ಹೇಳಿ 950 ಗ್ರಾಂ ಚಿನ್ನದ ಗಟ್ಟಿ ಕೊಡು, ಫೋಟೋ ತೆಗೆಸಿ ಹಿಂದಿರುಗಿಸುತ್ತೇನೆ ಎಂದು ಹೇಳಿ ಚಿನ್ನದ ಗಟ್ಟಿ ಪಡೆದು ಎಸ್ಕೇಪ್ ಆಗಿದ್ದರು. ಬಳಿಕ ಅಂಗಡಿ ಮಾಲೀಕ ಚಿನ್ನ ಕೇಳಿದಾಗ ಹಣ ಕೊಡುತ್ತೇನೆಂದು ಚೆಕ್ ಕೊಟ್ಟಿದ್ದರು. ಆದರೆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಚಿನ್ನದ ಅಂಗಡಿ ಮಾಲೀಕ ಕೇಳಿದಾಗ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಪಿಎಸ್ ಐ ಮೇಲೆ ದೂರು ದಾಖಲಾಗಿತ್ತು. ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಪಿಎಸ್ ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದೆ.
ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ
ಈ ನಡುವೆ ಜಮೀನಿನ ಕರಾರು ಪತ್ರವನ್ನು ಚಿನ್ನದ ಅಂಗಡಿ ಮಾಲೀಕನಿಗೆ ಸಂತೋಷ್ ನೀಡಿದ್ದರು. ಆದರೆ ಆ ಜಾಗವನ್ನು ಬೇರೆಯವರಿಗೆ ಮಾರಾಟ ಮಾಡಿದ್ದರು. ಇದನ್ನು ಚಿನ್ನದ ಅಂಗಡಿ ಮಾಲೀಕ ಪ್ರಶ್ನಿಸಿದ ವೇಳೆ ಆತನಿಗೆ ಇನ್ಸ್ಪೆಕ್ಟರ್ ಸಂತೋಷ್ ಖಾಲಿ ಚೆಕ್ ನೀಡಿದ್ದರು. ನಂತರ, ಚೆಕ್ ಕೂಡ ಬೌನ್ಸ್ ಆಗಿತ್ತು. ಮತ್ತೆ ಹಣ ಅಥವಾ ಚಿನ್ನ ಕೇಳಿದಾಗ ಸಂತೋಷ್ ಅವರು ಚಿನ್ನದ ಅಂಗಡಿ ಮಾಲೀಕನಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ, ಹಲಸೂರು ಗೇಟ್ ಠಾಣೆಯಲ್ಲಿ ಪಿಎಸ್ಐ ಸಂತೋಷ್ ವಿರುದ್ಧ ಅಧಿಕಾರ ದುರುಪಯೋಗ ಮತ್ತು ವಂಚನೆ ಪ್ರಕರಣ ದಾಖಲಾಗಿತ್ತು.
Bangalore 950 Grams of Gold Seized in Recovery Scam, Cottonpet Police station PSI Santosh Suspended Following FIR.
23-02-26 11:14 am
HK News Staffer
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm