ಬ್ರೇಕಿಂಗ್ ನ್ಯೂಸ್
24-03-25 11:04 pm HK News Desk ಕರ್ನಾಟಕ
ಗದಗ, ಮಾ.24 : ಎಂಟು ವರ್ಷದ ಹಿಂದೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದ್ದು 23 ಜನರಿಗೆ ಐದು ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ.
ರಾಜ್ಯವೇ ಬೆಚ್ಚಿಬಿದ್ದಿದ್ದ ದೊಂಬಿ ಪ್ರಕರಣದಲ್ಲಿ ಎಂಟು ವರ್ಷದ ನಂತರ ತೀರ್ಪು ಹೊರಬಿದ್ದಿದ್ದು ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದ ದಂಡ ವಸೂಲಿಗೆ ಆದೇಶ ನೀಡಲಾಗಿದೆ. ದಂಡದ ಮೊತ್ತದಲ್ಲಿ ಪೊಲೀಸ್ ಠಾಣೆಯ ಹಾನಿ ಪರಿಹಾರವಾಗಿ 12 ಲಕ್ಷ 72 ಸಾವಿರ ರೂಪಾಯಿ ನೀಡಲು ಆದೇಶಿಸಲಾಗಿದೆ.


2017ರ ಫೆ.5ರಂದು ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಮುಂದೆ ಸೇರಿದ್ದ ಗುಂಪು ಬೆಂಕಿ ಹಚ್ಚಿ ಆಕ್ರೋಶ ತೋರಿತ್ತು. ಅಕ್ರಮ ಮರಳು ಸಾಗಿಸುವ ವಾಹನ ತಡೆದು ಚಾಲಕನನ್ನು ಪೋಲಿಸರು ಥಳಿಸಿದ್ದರೆಂದು ಆರೋಪದಲ್ಲಿ ಠಾಣೆಗೆ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ ಬಟ್ಟೂರು ಗ್ರಾಮದ ನಿವಾಸಿ, ಮರಳು ಲಾರಿಯ ಚಾಲಕನಾಗಿದ್ದ ಶಿವಪ್ಪ ಡೋಣಿ ಗಾಯಗೊಂಡು ಸಾವನ್ನಪ್ಪಿದ್ದರು. ಆಸ್ಪತ್ರೆಯಿಂದ ಶವ ತಂದು ಪೊಲೀಸ್ ಠಾಣೆಯ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ್ದರು.
ಪ್ರತಿಭಟನೆಯ ಕಾವು ಹೆಚ್ಚಾಗಿ ರೊಚ್ಚಿಗೆದ್ದ ಜನರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿದ್ದರು. ಗಲಾಟೆ ವೇಳೆ ಪೊಲೀಸ್ ಠಾಣೆಯಲ್ಲಿದ್ದ ಪೀಠೋಪಕರಣ, ಪೊಲೀಸ್ ಜೀಪ್, ಹತ್ತಾರು ದ್ವಿಚಕ್ರ ವಾಹನಗಳಿಗೆ ಬೆಂಕಿಯಲ್ಲಿ ಸುಟ್ಟು ಹೋಗಿತ್ತು. ಪ್ರಕರಣ ನಡೆದ ನಂತರ ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.
ಘಟನೆ ಸಂಬಂಧಿಸಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ 112 ಜನರ ಮೇಲೆ ಪ್ರಕರಣ ದಾಖಲಾಗಿತ್ತು. 112 ಜನರ ಪೈಕಿ 8 ಜನರು ಮೃತಪಟ್ಟಿದ್ದು, ಓರ್ವ ಬಾಲಪರಾಧಿಯಾಗಿದ್ದ. ಉಳಿದ 103 ಜನರ ಮೇಲೆ ತನಿಖೆ ನಡೆಸಿ ದೋಷಾರೋಪ ಹಾಕಿದ್ದು, ಈ ಪೈಕಿ 23 ಜನರ ಆರೋಪ ಸಾಬೀತಾಗಿದೆ. ಈ ಹಿನ್ನೆಲೆ ನ್ಯಾಯಾಧೀಶ ರಾಜೇಶ್ವರ ಶೆಟ್ಟಿ ಶಿಕ್ಷೆ ಪ್ರಕಟಿಸಿದ್ದು ಭಾರೀ ದಂಡಕ್ಕೆ ಸೂಚಿಸಿದ್ದಲ್ಲದೆ, 23 ಜನ ಆರೋಪಿತರಿಗೆ ಐದು ವರ್ಷ ಶಿಕ್ಷೆ ನೀಡಿದ್ದಾರೆ.
Gadag 23 Sentenced in Lakshmeshwar Police Station fire Case; Heavy Fines Imposed and, 12 Lakhs Compensation Awarded to the Station.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm