ಬ್ರೇಕಿಂಗ್ ನ್ಯೂಸ್
25-03-25 11:25 am Bangalore Correspondent ಕರ್ನಾಟಕ
ಬೆಂಗಳೂರು, ಮಾ 24: ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮತ್ತು ವಿಪಕ್ಷಗಳ ನಡುವೆ ತೀವ್ರ ಚರ್ಚೆ ಆರಂಭವಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇತ್ತೀಚೆಗೆ ಖಾಸಗಿ ಚಾನೆಲ್ ನ "ಇಂಡಿಯಾ ಡೈಮಂಡ್ ಸ್ಟೇಟ್ಸ್ ಸಮಿಟ್ 2025" ರಲ್ಲಿ ಭಾಗವಹಿಸಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರದ ಬಗ್ಗೆ ಮಾತನಾಡುತ್ತಾ ಸಂವಿಧಾನ ಬದಲಾಗುವ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯ ಈ ಹೇಳಿಕೆ ರಾಷ್ಟ್ರಮಟ್ಟದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದೀಗ ವಿಪಕ್ಷಗಳು ಡಿಕೆಶಿ ಹೇಳಿಕೆಯನ್ನು ವಿರೋಧಿಸಿದ್ದು, ಪ್ರತಿಭಟನೆಗೂ ಕರೆ ನೀಡಿದ್ದಾರೆ.
ಡಿಕೆ ಶಿವಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ಸದ್ಯ ರಾಜ್ಯದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಮಾತನಾಡಿದ್ದು, ಡಿಕೆಶಿ ಓಡಾಡುವ ಕಡೆ ಮುತ್ತಿಗೆ ಹಾಗು ಘೇರಾವ್ ಹಾಕಲು ಕರೆ ನೀಡಿದ್ದಾರೆ.
ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಯಾರು ಮಾಡಬಾರದು. ಡಿಸಿಎಂ ಡಿಕೆ ಶಿವಕುಮಾರ್ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಸಂವಿಧಾನಕ್ಕೆ ಅಪಮಾನ ಮಾಡಿದ್ದಾರೆ. ಹಿಂದೆ ನಮ್ಮದೇ ಪಕ್ಷದಲ್ಲಿ ಒಬ್ಬರು ಈ ರೀತಿ ನಡೆದುಕೊಂಡಾಗ, ಅವರಿಗೆ ನಾವು ಟಿಕೆಟ್ ಕೊಟ್ಟಿಲ್ಲ. ಇವಾಗ ಅದೇ ರೀತಿಯಲ್ಲಿ ಕಾಂಗ್ರೆಸ್ ನ ಮಲ್ಲಿಕಾರ್ಜುನ್ ಖರ್ಗೆ, ಡಿಸಿಎಂ ಡಿಕೆಶಿ ಸದಸ್ಯತ್ವ ಅನರ್ಹ ಗೊಳಿಸುವ ಧೈರ್ಯ ತೋರಿಸಲಿ ಎಂದು ಹೇಳಿದ್ದಾರೆ.
ಡಿಕೆಶಿ ರಾಜೀನಾಮೇ ಕೊಡ್ಬೇಕು ; ಪಿ ರಾಜೀವ್
ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಸದಾ ಸಂವಿಧಾನದ ಬಗ್ಗೆ ಮಾತಾಡುವ ಪ್ರಿಯಾಂಕ ಖರ್ಗೆ ಇವಾಗ ಮಾತಾಡಬೇಕು. ರಾಜ್ಯದ ಜನರಿಗೆ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು. ಅವ್ರು ಕ್ಷಮೆ ಕೇಳುವ ತನಕ ನಾವಂತೂ ಸುಮ್ಮನೆ ಬಿಡಲ್ಲ. ಅವರು ಹೋದ ಕಡೆಗಳಲ್ಲಿ ಕಪ್ಪು ಪಟ್ಟಿ ಪ್ರದರ್ಶನ ಮಾಡುತ್ತೇವೆ. ಅವರಿಗೆ ದಲಿತ ಸಮಾಜದಿಂದ ಘೇರಾವ್ ಹಾಕುತ್ತೇವೆ ಎಂದು ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಶಾಸಕ ಪಿ ರಾಜೀವ್ ಹೇಳಿದ್ದಾರೆ.
In a significant political development, the Bharatiya Janata Party (BJP) has ramped up its protests against Karnataka Congress leader DK Shivakumar, demanding formal recognition of his actions while opposing recent constitutional changes aimed at providing reservations for Muslims. The BJP has initiated a series of gherao protests, targeting areas wherever Shivakumar is scheduled to appear.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm