ಬ್ರೇಕಿಂಗ್ ನ್ಯೂಸ್
26-03-25 06:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.26 : ಬಿಜೆಪಿಯಲ್ಲಿ ರೆಬೆಲ್ ಶಾಸಕನೆಂದೇ ಗುರುತಿಸಲ್ಪಟ್ಟು ರಾಜ್ಯ ಬಿಜೆಪಿಗೆ ಬಿಸಿ ತುಪ್ಪವಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಇದೇ ವೇಳೆ, ಯತ್ನಾಳ್ ಜೊತೆಗೆ ಗುರುತಿಸಿಕೊಂಡಿದ್ದ ಶಾಸಕ ಬಿಪಿ ಹರೀಶ್ ಮತ್ತು ಕೆಲವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ. ಕೇಂದ್ರ ಶಿಸ್ತು ಸಮಿತಿ ಎರಡು ಬಾರಿ ಶೋಕಾಸ್ ನೋಟಿಸ್ ನೀಡಿದ್ದರೂ ಪದೇ ಪದೇ ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದರು. ಕೊನೆಗೆ ಫೆಬ್ರವರಿ 10 ರಂದು ಶೋಕಾಸ್ ನೋಟಿಸ್ಗೆ ಯತ್ನಾಳ್ ಉತ್ತರ ನೀಡಿದ್ದರು.
ಆನಂತರ, ಆರೆಸ್ಸೆಸ್ ಹಿರಿಯ ನಾಯಕರು ಯತ್ನಾಳ್ ಮತ್ತು ಅವರ ಬಳಗದ ಜೊತೆಗೆ ಕುಳಿತು ಮಾತನಾಡಿ ಹೊಂದಾಣಿಕೆಯಲ್ಲಿ ಹೋಗುವಂತೆ ಮನವೊಲಿಕೆ ಮಾಡಿದ್ದರು.ಆದರೂ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುವುದನ್ನು ನಿಲ್ಲಿಸಿರಲಿಲ್ಲ. ಹೀಗಾಗಿ ಪಕ್ಷದ ಕೇಂದ್ರ ಶಿಸ್ತು ಸಮಿತಿ ದಿಢೀರ್ ನಿರ್ಧಾರ ಕೈಗೊಂಡಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಹಾಕುವ ಯತ್ನ ಮಾಡಿದೆ. ಅಲ್ಲದೇ ಇತರೆ ರೆಬೆಲ್ ನಾಯಕರಿಗೂ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದೆ.
ಯತ್ನಾಳ್ ಕಳೆದ ಒಂದು ವರ್ಷದಲ್ಲಿ ರಾಜ್ಯ ಬಿಜೆಪಿಗೆ ಎದುರಾಗಿ ತಮ್ಮದೇ ತಂಡ ಕಟ್ಟಿಕೊಂಡು ಪ್ರತ್ಯೇಕ ಸಭೆ ಮಾಡುತ್ತಿದ್ದರು. ಈ ಸಂಬಂಧ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿತ್ತು. ಆದರೂ ಯತ್ನಾಳ್ ಸೈಲೆಂಟ್ ಆಗಿರಲಿಲ್ಲ. ಹೀಗಾಗಿ ಇತ್ತೀಚೆಗೆಷ್ಟೇ ಮತ್ತೊಂದು ಶೋಕಾಸ್ ನೀಡಲಾಗಿತ್ತು. ಇದೀಗ ವಿಜಯೇಂದ್ರ ಮತ್ತು ಯಡಿಯೂರಪ್ಪ ದೆಹಲಿಯಲ್ಲಿ ಇರುವಾಗಲೇ ಉಚ್ಚಾಟನೆ ಆದೇಶ ಹೊರಡಿಸಲಾಗಿದೆ.
ನೀವು ಪಕ್ಷದ ಶಿಸ್ತನ್ನು ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ. ಹಾಗೇ ನೀವು ಇಲ್ಲಿಯವರೆಗೆ ಹೊಂದಿದ್ದ ಪಕ್ಷದ ಜವಾಬ್ದಾರಿಯಿಂದ ನಿಮ್ಮನ್ನು ತೆಗೆದುಹಾಕಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ನೀಡಿರುವ ಆದೇಶದಲ್ಲಿ ತಿಳಿಸಿದ್ದಾರೆ.
Basangouda Patil Yatnal, BJP MLA from Bijapur City, Karnataka, has been expelled from the party for six years for his statements against the party and senior leader BS Yediyurappa.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm