ಬ್ರೇಕಿಂಗ್ ನ್ಯೂಸ್
26-03-25 07:58 pm HK News Desk ಕರ್ನಾಟಕ
ಶಿವಮೊಗ್ಗ, ಮಾ.26 : ಇಲಾಖೆಯ ಪೊಲೀಸ್ ಸಿಬ್ಬಂದಿಯಿಂದಲೇ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ವಿಭಾಗದ ಡಿವೈಎಸ್ಪಿ ಕೃಷ್ಣಮೂರ್ತಿ ಟಿ.ಪಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತನ್ನ ಅಧೀನದಲ್ಲಿ ಕೆಲಸ ಮಾಡುವ ಸಹಾಯಕ ಹೆಡ್ ಕಾನ್ ಸ್ಟೇಬಲ್ ಒಬ್ಬರಿಂದ 5,000 ರೂ. ಲಂಚ ಪಡೆಯುತ್ತಿದ್ದಾಗ ಕೃಷ್ಣಮೂರ್ತಿ ಅವರು ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದೂರಿನ ಪ್ರಕಾರ, ಪ್ರಸನ್ನ ಕುಮಾರ್ ಟಿ.ಎಸ್(35) ಕಳೆದ ಒಂದೂವರೆ ವರ್ಷಗಳಿಂದ ಭದ್ರಾವತಿ ತಾಲ್ಲೂಕು ಖಜಾನೆಯಲ್ಲಿ ಖಜಾನೆ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಹುದ್ದೆಯಲ್ಲಿ ಮುಂದುವರಿಯಲು ಮತ್ತು ರಜೆ ಸಂಬಂಧಿತ ಅನುಮೋದನೆಗಾಗಿ ಕೃಷ್ಣಮೂರ್ತಿ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಲಂಚವನ್ನು ಶಿವಮೊಗ್ಗ ಡಿಎಆರ್ ವಿಭಾಗದ ಸಹಾಯಕ ಮೀಸಲು ಸಬ್ ಇನ್ಸ್ಪೆಕ್ಟರ್(ಎಆರ್ಎಸ್ಐ) ರವಿ ಎಂ.ಕೆ ಅವರಿಗೆ ಹಸ್ತಾಂತರ ಮಾಡಬೇಕಾಗಿತ್ತು. ಲಂಚ ನೀಡಲು ಇಷ್ಟವಿಲ್ಲದ ಕುಮಾರ್, ಹಣ ಕೇಳುತ್ತಿರುವ ಸಂಭಾಷಣೆಯನ್ನು ರೆಕಾರ್ಡ್ ಮಾಡಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಡಿಎಆರ್ ಪೊಲೀಸ್ ಕ್ವಾರ್ಟರ್ಸ್ನಲ್ಲಿರುವ ನಿವಾಸದಲ್ಲಿ ಕೃಷ್ಣಮೂರ್ತಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು. ಲೋಕಾಯುಕ್ತ ಅಧಿಕಾರಿಗಳು ಲಂಚದ ಹಣವನ್ನು ವಶಪಡಿಸಿ ಡಿವೈಎಸ್ಪಿ ಕೃಷ್ಣಮೂರ್ತಿ ಮತ್ತು ಎಸ್ಐ ರವಿಯನ್ನು ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ ಚೌಧರಿ ಎಂ.ಎಚ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿತ್ತು.
Deputy Superintendent of Police (DYSP) Krishnamurthy from the Shivamogga district police department was arrested in a Lokayukta sting operation for allegedly soliciting a bribe for favorable posting requests.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm