ಬ್ರೇಕಿಂಗ್ ನ್ಯೂಸ್
29-03-25 09:19 pm HK News Desk ಕರ್ನಾಟಕ
ಕಾರವಾರ, ಮಾ.29 : ಅಡಿಕೆ ಸುಲಿಯುವ ಕೆಲಸ ನಡೆಯುತ್ತಿದ್ದಾಗ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಪತ್ನಿ ಶೋಭ ಹೊಸಬಾಳೆ ಮೃತ ದುರ್ದೈವಿ. ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸಕ್ಕೆ ಕೆಲಸದವರನ್ನು ನೇಮಕ ಮಾಡಿಕೊಂಡಿದ್ದರು. ಕೆಲಸ ಹೇಗೆ ನಡೀತಿದೆ ಎಂದು ನೋಡಲು ಹೋದಾಗ, ಮೆಷಿನ್ಗೆ ಸೀರೆ ಸಿಲುಕಿದ್ದು ನೆಲಕ್ಕೆ ಬಿದ್ದ ಮಹಿಳೆಯ ತಲೆ ಯಂತ್ರಕ್ಕೆ ಬಡಿದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವಗೊಂಡು ಮಹಿಳೆ ಮೃತಪಟ್ಟಿದ್ದಾರೆ.
ಕೆಲಸಗಾರರು ಸ್ಥಳದಲ್ಲಿ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಕಳೆದ ಮೂರು ವರ್ಷಗಳಿಂದ ಚಾಲಿ ಅಡಿಕೆ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ವಿಧಿ ಕೈಕೊಟ್ಟಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೋಭಾ ಹೆಗಡೆ ತನ್ನ ಪತಿಯ ಪ್ರತಿ ಕಾರ್ಯಕ್ಕೂ ಬೆನ್ನೆಲುಬಾಗಿ ನಿಂತಿದ್ದರು. ದಿಢೀರ್ ಎದುರಾದ ಘಟನೆಯಿಂದ ಪರಿಸರದಲ್ಲಿ ದುಃಖ ಮಡುಗಟ್ಟಿದೆ.
Tragic Accident, Woman Dies After Saree Caught in Areca Nut Peeling Machine in Sirsi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm