ಬ್ರೇಕಿಂಗ್ ನ್ಯೂಸ್
29-03-25 09:19 pm HK News Desk ಕರ್ನಾಟಕ
ಕಾರವಾರ, ಮಾ.29 : ಅಡಿಕೆ ಸುಲಿಯುವ ಕೆಲಸ ನಡೆಯುತ್ತಿದ್ದಾಗ ಯಂತ್ರಕ್ಕೆ ಸೀರೆ ಸಿಲುಕಿ ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ವೆಂಕಟೇಶ ಹೆಗಡೆ ಹೊಸಬಾಳೆ ಅವರ ಪತ್ನಿ ಶೋಭ ಹೊಸಬಾಳೆ ಮೃತ ದುರ್ದೈವಿ. ಮನೆಯಲ್ಲಿ ಅಡಿಕೆ ಸುಲಿಯುವ ಕೆಲಸಕ್ಕೆ ಕೆಲಸದವರನ್ನು ನೇಮಕ ಮಾಡಿಕೊಂಡಿದ್ದರು. ಕೆಲಸ ಹೇಗೆ ನಡೀತಿದೆ ಎಂದು ನೋಡಲು ಹೋದಾಗ, ಮೆಷಿನ್ಗೆ ಸೀರೆ ಸಿಲುಕಿದ್ದು ನೆಲಕ್ಕೆ ಬಿದ್ದ ಮಹಿಳೆಯ ತಲೆ ಯಂತ್ರಕ್ಕೆ ಬಡಿದಿದೆ. ಘಟನೆಯಲ್ಲಿ ತೀವ್ರ ರಕ್ತಸ್ರಾವಗೊಂಡು ಮಹಿಳೆ ಮೃತಪಟ್ಟಿದ್ದಾರೆ.
ಕೆಲಸಗಾರರು ಸ್ಥಳದಲ್ಲಿ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಕಳೆದ ಮೂರು ವರ್ಷಗಳಿಂದ ಚಾಲಿ ಅಡಿಕೆ ಸುಲಿಯುವ ವೇಳೆ ಶೋಭಾ ಹೆಗಡೆ ಅವರೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದರು. ಆದರೆ, ಈ ಬಾರಿ ವಿಧಿ ಕೈಕೊಟ್ಟಿದ್ದು, ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶೋಭಾ ಹೆಗಡೆ ತನ್ನ ಪತಿಯ ಪ್ರತಿ ಕಾರ್ಯಕ್ಕೂ ಬೆನ್ನೆಲುಬಾಗಿ ನಿಂತಿದ್ದರು. ದಿಢೀರ್ ಎದುರಾದ ಘಟನೆಯಿಂದ ಪರಿಸರದಲ್ಲಿ ದುಃಖ ಮಡುಗಟ್ಟಿದೆ.
Tragic Accident, Woman Dies After Saree Caught in Areca Nut Peeling Machine in Sirsi.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm