ಬ್ರೇಕಿಂಗ್ ನ್ಯೂಸ್
31-03-25 12:24 pm HK News Desk ಕರ್ನಾಟಕ
ಬೆಳಗಾವಿ, ಮಾ.31 : ಯತ್ನಾಳ್ ನಾಲಗೆ ಮತ್ತು ತಲೆಗೆ ಕನೆಕ್ಷನ್ ತಪ್ಪಿಹೋಗಿದೆ. ನಾಲಗೆ ಹರಿಯಬಿಟ್ಟಿದಕ್ಕೆ ಬಿಜೆಪಿಯಲ್ಲಿ ಯತ್ನಾಳರನ್ನ ಉಚ್ಛಾಟನೆ ಮಾಡಿದ್ದಾರೆ. ನಮ್ಮ ಸಮಾಜದವರು ಎಂದು ನಾವು ನಮ್ಮ ಚೌಕಟ್ಟಿನಲ್ಲಿ ಅವರಿಗೆ ಗೌರವ ಕೊಡುತ್ತೇವೆ. ಆದರೆ, ಅವರು ಮಾತನಾಡೋ ರೀತಿ ನೋಡಿದರೆ ನಾಲಿಗೆ, ತಲೆಗೆ ಕನೆಕ್ಷನ್ ತಪ್ಪಿದೆ ಅನಿಸುತ್ತೆ ಎಂದು ಬಸವನಗೌಡ ಯತ್ನಾಳ್ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ನಮ್ಮ (ಪಂಚಮಸಾಲಿ) ಸಮಾಜದ ಹಿರಿಯರು ಎಂದು ಚೌಕಟ್ಟಿನಲ್ಲಿ ಗೌರವ ನೀಡುತ್ತಿದ್ದೆವು. ಅವರು ನಾಲಗೆ ಹರಿಯ ಬಿಡುವುದರಿಂದ ಬಿಜೆಪಿ ಉಚ್ಚಾಟಿಸಿದೆ. ಅವರ ಮಾತಿನ ರೀತಿ ಗಮನಿಸಿದರೆ ನಾಲಗೆ ಮತ್ತು ತಲೆಗೆ ಕನೆಕ್ಷನ್ ತಪ್ಪಿದೆ. ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಶೇ.80ರಷ್ಟು ಪಂಚಮಸಾಲಿಗರು ಬಿಜೆಪಿಯಲ್ಲಿದ್ದಾರೆ ಎಂದಿದ್ದು ನನ್ನ ಮನಸ್ಸಿಗೆ ಬಹಳಷ್ಟು ನೋವು ತಂದಿದೆ. ಪಂಚಮಸಾಲಿ ಹೋರಾಟ ಪಕ್ಷಾತೀತ, ನಾವೆಲ್ಲರೂ ಪಾಲ್ಗೊಂಡಿದ್ದೆವು. ಮೀಸಲು ಕ್ಷೇತ್ರಗಳು ಸೇರಿ ಇನ್ನುಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲು ಲಿಂಗಾಯತ ಪಂಚಮಸಾಲಿಗರು ಕಾರಣ ಎಂದು ಕಿಡಿಕಾರಿದರು.
ನೀವು ಕೂಡಲಸಂಗಮ ಶ್ರೀಗಳ ಪ್ರತಿಭಟನೆಗೆ ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಕಾಂಗ್ರೆಸ್ ಪಕ್ಷ, ಅವರು ಬಿಜೆಪಿಯವರು. ಸಮಾಜ ಮತ್ತು ಪಕ್ಷ ಬೇರೆ ಬೇರೆ. ಹಾಗಾಗಿ, ಅವರ ಪ್ರತಿಭಟನೆಗೆ ನಾವು ಬೆಂಬಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.
ಸರ್ಕಾರಕ್ಕೆ ಸ್ವಾಮೀಜಿ ಮತ್ತು ಮಠಮಾನ್ಯರು ಮಾರ್ಗದರ್ಶನ ಕೊಡಬೇಕು. ಎಲ್ಲಾದರೂ, ಏನಾದರೂ ತಪ್ಪಿದ್ದರೆ ಸಲಹೆ ನೀಡಬೇಕು. ಅದು ಇತಿಮಿತಿಯಲ್ಲಿ ಇರಬೇಕು. ಅದು ಅತೀ ಆಗಬಾರದು ಎಂದು ಅಸಮಾಧಾನ ಹೊರಹಾಕಿದರು.
ಗೃಹಲಕ್ಷ್ಮಿ ಯೋಜನೆ ಕುರಿತು ಮಾತನಾಡಿ, ಜನವರಿ ತಿಂಗಳ ಕಂತಿನ ಹಣವನ್ನು ಖಜಾನೆಗೆ ಕಳಿಸಿದ್ದೇವೆ. ಇದು ಯುಗಾದಿ ಮತ್ತು ಈದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಖುಷಿಯ ವಿಚಾರ. ಇನ್ನು ಫೆಬ್ರವರಿ ತಿಂಗಳ ಹಣವನ್ನು ಶೀಘ್ರವೇ ಕೊಡುತ್ತೇವೆ ಎಂದು ಭರವಸೆ ನೀಡಿದರು.
Yatnal Disconnect from BJP, Tensions Rise in Panchamasaligarh as Lakshmi Hebbalkar Ignites Controversy. In a dramatic turn of events, political tensions have escalated in Panchamasaligarh following remarks made by Lakshmi Hebbalkar regarding the controversial statements of local leader Yatnal. During a recent public address, Hebbalkar claimed that Yatnal has "lost the connection of his head," implying a disconnect between his thoughts and actions.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm