ಬ್ರೇಕಿಂಗ್ ನ್ಯೂಸ್
31-03-25 07:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ದಿನ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೇ..? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ ಸಿಕ್ಕಿದೆ ಎಂಬ ಮೋದಿಯವರ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ ಮಳೆ ಜಾಸ್ತಿ ಬಂದರೂ ನೆಹರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.
ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟಕ್ಕೂ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
Accountability in Power, Dinesh Gundurao Challenge to Prime Minister Modi.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 05:48 pm
Mangalore Correspondent
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm