ಬ್ರೇಕಿಂಗ್ ನ್ಯೂಸ್
31-03-25 07:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ದಿನ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೇ..? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ ಸಿಕ್ಕಿದೆ ಎಂಬ ಮೋದಿಯವರ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ ಮಳೆ ಜಾಸ್ತಿ ಬಂದರೂ ನೆಹರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.
ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟಕ್ಕೂ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
Accountability in Power, Dinesh Gundurao Challenge to Prime Minister Modi.
23-02-26 11:14 am
HK News Staffer
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm