ಬ್ರೇಕಿಂಗ್ ನ್ಯೂಸ್
31-03-25 07:41 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.31 : ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟು ದಿನ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೇ..? ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ನೀತಿಗಳಿಂದಾಗಿ ದಶಕಗಳಿಂದ ನಕ್ಸಲಿಸಂಗೆ ಪ್ರೋತ್ಸಾಹ ಸಿಕ್ಕಿದೆ ಎಂಬ ಮೋದಿಯವರ ಹೇಳಿಕೆ ವಿರುದ್ಧ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಕ್ಸಲ್ ಸಮಸ್ಯೆಗೆ ಕಾಂಗ್ರೆಸ್ ನೀತಿ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಒಂದು ಕಾಂಗ್ರೆಸ್ ಇರಬೇಕು ಇಲ್ಲವೆ ನೆಹರು ಇರಬೇಕು. ಇವರೆಡನ್ನು ಕನವರಿಸದೆ ಪ್ರಧಾನಿ ಜೀವಿಸಲಾರರು ಎಂದು ವ್ಯಂಗ್ಯವಾಡಿದ್ದಾರೆ.
ಮೋದಿಯವರ ವರಸೆ ಹೇಗಿದೆ ಎಂದರೆ, ದೇಶದ GDP ಕುಸಿದರೆ ಅದಕ್ಕೆ ಕಾಂಗ್ರೆಸ್ ಕಾರಣ ಎನ್ನುತ್ತಾರೆ ಇಲ್ಲವೆ ನೆಹರು ಕಾರಣ ಎನ್ನುತ್ತಾರೆ. ನಿರುದ್ಯೋಗ, ರೂಪಾಯಿ ಅಪಮೌಲ್ಯಕ್ಕೂ ಇದೆ ಕಾರಣ ಕೊಡುತ್ತಾರೆ. ಕೊನೆಗೆ ಮಳೆ ಜಾಸ್ತಿ ಬಂದರೂ ನೆಹರು ಕಾರಣ, ಮಳೆ ಬಾರದೆ ಇದ್ದರೂ ನೆಹರು ಕಾರಣ ಎನ್ನುತ್ತಾರೆ. ಇಂತಹವರಿಗೆ ಏನನ್ನಬೇಕು.
ಅಲ್ಲಾ ಸ್ವಾಮಿ ಮೋದಿಯವರೆ, ಕಳೆದ 11 ವರ್ಷಗಳಿಂದ ನೀವೆ ಅಧಿಕಾರದಲ್ಲಿ ಮೊಳೆ ಹೊಡೆದು ಕುಳಿತುಕೊಂಡಿದ್ದೀರಿ. ಇಷ್ಟಕ್ಕೂ ನೀವು ಕಡಿದು ಕಟ್ಟೆ ಹಾಕಿರುವುದು ಏನು.? ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ ಹಾಗೂ ನೆಹರು ಮೇಲೆ ಗೂಬೆ ಕೂರಿಸುವುದೇ ನಿಮ್ಮ ಕೆಲಸವೆ..? ತಮ್ಮನ್ನು ತಾವು ಜೇಮ್ಸ್ ಬಾಂಡ್ ಎಂದು ಭಾವಿಸಿರುವ ನಿಮಗೆ ಕಳೆದ 11 ವರ್ಷಗಳಿಂದ ನಕ್ಸಲ್ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಲಿಲ್ಲವೇ ? ಎಂದು ಪ್ರಶ್ನಿಸಿದ್ದಾರೆ.
Accountability in Power, Dinesh Gundurao Challenge to Prime Minister Modi.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm