ಬ್ರೇಕಿಂಗ್ ನ್ಯೂಸ್
01-04-25 09:35 pm Bangalore Correspondent ಕರ್ನಾಟಕ
ಬೆಂಗಳೂರು, ಏ 01: ಅನೇಕ ಬೆಲೆ ಏರಿಕೆಗಳೊಂದಿಗೆ ಜನರ ಮೇಲೆ ಬರೆ ಎಳೆದಿರುವ ರಾಜ್ಯ ಸರ್ಕಾರ, ಇದೀಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದೆ. ಡೀಸೆಲ್ ಬೆಲೆ 2 ರೂ. ಏರಿಸಿ ಸರ್ಕಾರ ರಾಜ್ಯದ ಜನರಿಗೆ ಮತ್ತೊಂದು ಬರೆ ಎಳೆದಿದೆ.
ಏಪ್ರಿಲ್ 1ರಿಂದ ಅನ್ವಯವಾಗುವಂತೆ ಈಗಾಗಲೇ ಹಾಲು, ವಿದ್ಯುತ್, ಟೋಲ್ ದರ ಏರಿಕೆ ಮಾಡಿರುವ ಸರ್ಕಾರ, ಇದೀಗ ಆ ಪಟ್ಟಿಗೆ ಡೀಸೆಲ್ ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು ಶೇ 18.44 ರಿಂದ ಶೇ 21.17 ಗೆ ಏರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ 2 ರೂ. ಏರಿಕೆ ಮಾಡಿದೆ.
ಅದರಂತೆ, ರಾಜ್ಯದಲ್ಲಿ ಡೀಸೆಲ್ ದರ 91.02 ರೂ. ಆಗಲಿದೆ. ಈ ಮುಂಚೆ ಬೆಂಗಳೂರಲ್ಲಿ ಡೀಸೆಲ್ ದರ 89.02 ರೂ. ಇದೆ. ಪರಿಷ್ಕೃತ ದರ ಇಂದಿನಿಂದಲೇ ಅನ್ವಯವಾಗಲಿದೆ. ಡೀಸೆಲ್ ಬೆಲೆ ಏರಿಕೆಯಿಂದ ರಾಜ್ಯದ ಜನರ ಮೇಲೆ ಮತ್ತೆ ಹೊರೆ ಬೀಳಲಿದೆ. ಸರಕುಗಳು, ಹಣ್ಣು, ತರಕಾರಿಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
2021ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 25.92 ಕ್ಕೆ ಹಾಗೂ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಶೇ 14.34ಕ್ಕೆ ಇಳಿಕೆ ಮಾಡಿತ್ತು. ಬಳಿಕ 2024ರ ಜೂನ್ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು 29.84%ಗೆ ಏರಿಕೆ ಮಾಡಿದ್ದರೆ, ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 18.44%ಗೆ ಏರಿಕೆ ಮಾಡಿತ್ತು. ಇದೀಗ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 21.17%ಗೆ ಏರಿಕೆ ಮಾಡಿದೆ.
The Karnataka State Government increased the sales tax on diesel, resulting in a price hike of Rs 2 per litre. Effective from April 1, 2025, the Karnataka Sales Tax rate on diesel has been revised from 18.44 percent to 21.17 percent, bringing the new price to Rs 91.02 per litre in the state.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 05:48 pm
Mangalore Correspondent
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm