ಬ್ರೇಕಿಂಗ್ ನ್ಯೂಸ್
02-04-25 03:07 pm Bangalore Correspondent ಕರ್ನಾಟಕ
ಬೆಂಗಳೂರು, ಎ.2 : ಸಿಎಂ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕುಮಾರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು ಗುತ್ತಿಗೆದಾರರೊಬ್ಬರ ದೂರಿನಂತೆ ಲೋಕಾಯುಕ್ತ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಇನ್ಸ್ಪೆಕ್ಟರ್ ಮನೆಯಲ್ಲಿ ಜೀಪ್ ಬಿಟ್ಟು ಎಸ್ಕೇಪ್ ಆಗಿದ್ದಾರೆ.
ಗುತ್ತಿಗೆದಾರ ಚೆನ್ನೇಗೌಡ ಹಾಗೂ ಕುಟುಂಬಕ್ಕೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡಿದ್ದಲ್ಲದೆ, ತಾನು ಹೇಳಿದವರಿಗೆ ಮನೆಯನ್ನೇ ಬರೆದುಕೊಡುವಂತೆ ಒತ್ತಡ ಹೇರಿದ್ದರು ಎನ್ನುವ ಬಗ್ಗೆ ದೂರು ದಾಖಲಾಗಿದೆ.

ಚೆನ್ನೇಗೌಡರ 4 ಕೋಟಿ ರೂ. ಮೌಲ್ಯದ ಮನೆಯನ್ನ ತಾನು ಹೇಳಿದವರಿಗೆ ಕಡಿಮೆ ಮೊತ್ತಕ್ಕೆ ನೋಂದಣಿ ಮಾಡುವಂತೆ ಇನ್ಸ್ಪೆಕ್ಟರ್ ಕುಮಾರ್ ಕಿರುಕುಳ ನೀಡುತ್ತಿದ್ದರು. ಚೆನ್ನೇಗೌಡ ಪತ್ನಿ ಸರ್ಕಾರಿ ಉದ್ಯೋಗದಲ್ಲಿದ್ದು, ಇಬ್ಬರಿಗೂ ಇನ್ಸ್ಪೆಕ್ಟರ್ ಕಿರುಕುಳ ಕೊಟ್ಟಿದ್ದರು. ಹಳೆಯ ಕೇಸ್ ಒಂದರಲ್ಲಿ ಬಿ ರಿಪೋರ್ಟ್ ಹಾಕುತ್ತೇನೆ, ಮನೆಯನ್ನು ಬರೆದುಕೊಡಿ ಎಂದು ಇನ್ಸ್ಪೆಕ್ಟರ್ ಕುಮಾರ್, ಚೆನ್ನೇಗೌಡರ ಮನೆಗೆ ಪುಂಡರನ್ನ ನುಗ್ಗಿಸಿ ದಾಂಧಲೆ ಮಾಡಿಸಿದ್ದರು. ಪುಂಡರ ದಾಂಧಲೆಯನ್ನು ಚೆನ್ನೇಗೌಡ ವಿಡಿಯೋ ಮಾಡಿಕೊಂಡಿದ್ದರು.
4 ಕೋಟಿ ರೂ. ಮೌಲ್ಯದ ಮನೆಯನ್ನ 60 ಲಕ್ಷ ರೂ.ಗೆ ಕೊಡುವಂತೆ ಚೆನ್ನೇಗೌಡ ದಂಪತಿಗೆ ಒತ್ತಡ ಹೇರುತ್ತಿದ್ದರು. ಅಲ್ಲದೆ, ಮನೆ ನೋಡಿಕೊಂಡು ಬರುವಂತೆ ಠಾಣೆಯ ಹೆಡ್ ಕಾನ್ಸ್ಟೇಬಲ್ ಉಮೇಶ್ ಜೊತೆ ಸಂಬಂಧಿಕರನ್ನ ಕಳುಹಿಸಿದ್ದರು. ಮಾ.18ರಂದು ಮಧ್ಯಾಹ್ನ 3.25ಕ್ಕೆ ಕೆಂಪು ಬಣ್ಣದ ಬ್ರೀಝಾ ಕಾರಿನಲ್ಲಿ ಮನೆಗೆ ಬಂದಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದ ಚೆನ್ನೇಗೌಡ ವಿಡಿಯೋ ಮಾಡಿದ್ದರು.
The Lokayukta conducted a raid on the residence of police Inspector Kumar of Annapoorneshwari Nagar police station, following the filing of a B report that has raised questions about his financial dealings. The raid comes in the wake of allegations surrounding a write-off related to a property valuation of 4 crores, prompting scrutiny into possible corruption and misuse of power.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 05:48 pm
Mangalore Correspondent
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm
ಯೆಯ್ಯಾಡಿ ಬಳಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ...
29-12-25 03:02 pm
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm