ಬ್ರೇಕಿಂಗ್ ನ್ಯೂಸ್
09-04-25 06:21 pm Bangalore Correspondent ಕರ್ನಾಟಕ
ಬೆಂಗಳೂರು, ಎ.9 : ಈಗಾಗಲೇ ಮುಡಾ ಹಗರಣದಲ್ಲಿ ಸಿಲುಕಿ ಇಡಿ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್ಬ್ಯಾಕ್ ಪಡೆದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರಾಸಿಕ್ಯೂಷನ್ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
2015ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಸಿದ್ದರಾಮಯ್ಯ ಅವರು 8 ಗಣಿ ಗುತ್ತಿಗೆಯನ್ನು ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಿದ್ದು ಇದಕ್ಕಾಗಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಕೋಟಿ ರೂ. ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಸೆಕ್ಷನ್ 7, 9, 11, 12 ಮತ್ತು 15 ಅಡಿ ಪ್ರಾಸಿಕ್ಯೂಚನ್ಗೆ ಅನುಮತಿ ಕೊಡಿ ಎಂದು ಮನವಿ ಮಾಡಲಾಗಿದೆ.
ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 59, 61, 42, 201, 227, 228, 229, 239, 314, 316 (5) 318 (1), 319, 322, 324 (2), 324 (3), 335, 336, 338, 340 ರಡಿ ಕೇಸು ದಾಖಲಿಸಿ ತನಿಖೆ ನಡೆಸಲು ಪೂರ್ವಾನುಮತಿ ನೀಡುವಂತೆ ರಾಮಮೂರ್ತಿ ಗೌಡ ಮನವಿ ಮಾಡಿದ್ದಾರೆ.
ದೂರುದಾರರ ಜೊತೆ ರಾಜ್ಯಪಾಲರು ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಆ ನಂತರ ದೂರಿನ ಮೇಲೆ ಸಹಿ ಮಾಡಿ ಕಾನೂನು ವಿಭಾಗದ ಅಭಿಪ್ರಾಯಕ್ಕೆ ಕಳುಹಿಸಿದ್ದಾರೆ. ಅಲ್ಲದೆ, ಸಾಲಿಸಿಟರ್ ಜನರಲ್ ಬಳಿ ಚರ್ಚೆ ನಡೆಸಿ ತೀರ್ಮಾನ ಮಾಡುವುದಾಗಿ ರಾಜ್ಯಪಾಲರು ದೂರುದಾರರಿಗೆ ಭರವಸೆ ನೀಡಿದ್ದಾರೆ. ದಾಖಲೆ ಪರಿಶೀಲಿಸಿ ವರದಿ ನೀಡುವಂತೆ ಸಾಲಿಸಿಟರ್ ಜನರಲ್ಗೆ ತಿಳಿಸಿದ್ದಾರೆ.
Karnataka Chief Minister Siddaramaiah is facing fresh controversy after social activist H Ramamurthy Gowda submitted a formal request to Governor Thaawarchand Gehlot, seeking sanction to prosecute the Chief Minister under the Prevention of Corruption Act, 1988.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm