ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm