ಬ್ರೇಕಿಂಗ್ ನ್ಯೂಸ್
09-04-25 09:31 pm HK News Desk ಕರ್ನಾಟಕ
ಶಿವಮೊಗ್ಗ, ಎ.9 : ಶಿವಮೊಗ್ಗ ಸ್ಮಾರ್ಟ್ ಸಿಟಿ ಚೀಫ್ ಇಂಜಿನಿಯರ್ ಒಬ್ಬರು ಗುತ್ತಿಗೆ ಕಾಮಗಾರಿಯ ಬಿಲ್ ಪಾಸ್ ಮಾಡಲು ಒಂದು ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಸ್ಮಾರ್ಟ್ ಸಿಟಿಯ ಪ್ರಭಾರ ಚೀಫ್ ಇಂಜಿನಿಯರ್ ಕೃಷ್ಣಪ್ಪ ಸಿಕ್ಕಿಬಿದ್ದವರು.
ಶಿವಮೊಗ್ಗ ಸ್ಮಾರ್ಟ್ ಸಿಟಿಯಲ್ಲಿ ಎಲ್ಇಡಿ ಪರದೆಯ ಅಳವಡಿಕೆ ಹಾಗೂ ನಿರ್ವಹಣೆ ಮಾಡುತ್ತಿದ್ದ ಖಾಸಗಿ ಕಂಪನಿಯಿಂದ ಬಿಲ್ ಪಾಸ್ ಮಾಡಲು ಇಂಜಿನಿಯರ್ 1 ಲಕ್ಷ ರೂ. ಲಂಚ ಕೇಳಿದ್ದರು ಎಂದು ದೂರು ಬಂದಿತ್ತು. ಲಂಚದ ಹಣವನ್ನು ಸ್ಮಾರ್ಟ್ ಸಿಟಿ ಕಚೇರಿ ಆವರಣದಲ್ಲಿ ಪಡೆಯುವಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಖಾಸಗಿ ಕಂಪನಿಯು ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯಾಪ್ತಿಯಲ್ಲಿ 7 ಕಡೆ ಡಿಸ್ಪ್ಲೇ ಬೋರ್ಡ್ ಅಳವಡಿಸಿ, ಅದರ ನಿರ್ವಹಣೆಯನ್ನು 5 ವರ್ಷ ಕಾಲ ಮಾಡಿತ್ತು. ಇವರಿಗೆ ಸ್ಮಾರ್ಟ್ ಸಿಟಿಯಿಂದ 11,16,100 ರೂ. ಬಿಲ್ ಪಾವತಿ ಮಾಡಬೇಕಾಗಿತ್ತು. ಇದಕ್ಕಾಗಿ ಕೃಷ್ಣಪ್ಪ ರೂ. 1 ಲಕ್ಷ ಹಣ ಲಂಚ ನೀಡುವಂತೆ ಕೇಳಿದ್ದರು. ಅದನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಬುಧವಾರ (ಏಪ್ರಿಲ್ 9) ಕೃಷ್ಣಪ್ಪ ಅವರ ವೃತ್ತಿಯ ಕೊನೆ ದಿನವಾಗಿತ್ತು. ಕೃಷ್ಣಪ್ಪ ಅವರು ತಮ್ಮ ಹುದ್ದೆಯಿಂದ ಬಿಡುಗಡೆ ಹೊಂದಿ ಪಾಲಿಕೆ ಆಯುಕ್ತರಿಗೆ ಚಾರ್ಜ್ ವಹಿಸಬೇಕಿತ್ತು. ಇದೇ ವೇಳೆಯಲ್ಲಿ ಲಂಚದ ಹಣಕ್ಕೆ ಕೈಯೊಡ್ಡಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
Karnataka Lokayukta Police on Wednesday trapped and arrested M. Krishnappa, in-charge Chief Engineer of Shivamogga Smart City project, while accepting a bribe of ₹1 lakh from a representative of a private firm.
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
30-04-25 03:14 pm
HK News Desk
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
30-04-25 11:26 am
Mangalore Correspondent
Puttur Elephant Attack: ಕಾಡಾನೆ ತಿವಿತಕ್ಕೆ ಪುತ್...
29-04-25 11:00 pm
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm