ಬ್ರೇಕಿಂಗ್ ನ್ಯೂಸ್
11-04-25 03:45 pm Bangalore Correspondent ಕರ್ನಾಟಕ
ಬೆಂಗಳೂರು, ಎ.11 : ಬೆಂಗಳೂರಿನ ಹೈಕೋರ್ಟ್ ಕಟ್ಟಡದಲ್ಲಿ ಜನ್ಮದಿನದ ನೆಪದಲ್ಲಿ ಮೋಜು - ಮಸ್ತಿ ಮಾಡಿದ ಆರೋಪದಲ್ಲಿ ಐವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹೈಕೋರ್ಟ್ ಕಟ್ಟಡದ ನೆಲಮಾಳಿಗೆಯ ವಿಶೇಷ ಕಟ್ಟಡದಲ್ಲಿ ಸಿಸಿ ಕ್ಯಾಮರಾ ಆಫ್ ಮಾಡಿಕೊಂಡು ಮೋಜು - ಮಸ್ತಿ ಮಾಡಿದ್ದು ಸಹಾಯಕ ಎಂಜಿನಿಯರ್ ಎ.ಟಿ. ಮೀನಾ ಸೇರಿ ನಾಲ್ವರು ಸಿಬ್ಬಂದಿಯನ್ನು ಲೋಕೋಪಯೋಗಿ ಇಲಾಖೆ ಸೇವೆಯಿಂದ ಅಮಾನತು ಮಾಡಿದೆ.
ಜನ್ಮದಿನ ಆಚರಿಸಿಕೊಂಡ ಸಹಾಯಕ ಎಂಜಿನಿಯರ್ ಎ.ಟಿ. ಮೀನಾ ಹಾಗೂ ಆ ಸಂದರ್ಭದಲ್ಲಿ ಅವರ ಜತೆ ಪಾಲ್ಗೊಂಡಿದ್ದ ಸಿಬ್ಬಂದಿ ಸಿಸಿ ಕ್ಯಾಮೆರಾ ಆಫ್ ಮಾಡಿಸಿರುವುದು ಭದ್ರತೆ ಮತ್ತು ಕರ್ತವ್ಯ ಲೋಪ ಎಸಗಿದ ಕೆಲಸವಾಗಿದೆ. ಕಚೇರಿಯ ಘನತೆ ಹಾಗೂ ಗೌರವ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಜಿ.ಎಚ್. ಚಿಕ್ಕೇಗೌಡ, ಸಹಾಯಕ ಎಂಜಿನಿಯರ್ಗಳಾದ ಲಾವಣ್ಯ, ನವೀನ್ ಮತ್ತು ಅಮೀನ್ ಎಸ್. ಅನ್ನದಿನ್ನಿ ಸರಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ. ಕರ್ನಾಟಕ ರಾಜ್ಯ ನಾಗರಿಕ (ನಡತೆ) ನಿಯಮಗಳು - 2012ರ ನಿಯಮ 3(1) (1ರಿಂದ 4) ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿರುತ್ತಾರೆ. ಹಾಗಾಗಿ, ಅವರೆಲ್ಲರನ್ನೂ ಅಮಾನತುಗೊಳಿಸಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಸರಕಾರದಿಂದ ಅಧಿಸೂಚಿಸಲ್ಪಟ್ಟ ಪ್ರಮುಖ ಹಾಗೂ ಗಣ್ಯ ವ್ಯಕ್ತಿಗಳ ಜಯಂತಿ ಮತ್ತು ಕಾರ್ಯಕ್ರಮಗಳನ್ನು ಮಾತ್ರ ಸರಕಾರಿ ಕಚೇರಿ ಹಾಗೂ ಆಚರಿಸಲು ಕಾನೂನುಬದ್ಧ ಅವಕಾಶವಿದೆ. ಉಳಿದ ಜಯಂತಿ, ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಈ ಬಗ್ಗೆ ದೂರಿನ ಕುರಿತಂತೆ ವಿಚಾರಣೆ ನಡೆಸಿದ್ದ ಶಿವಮೊಗ್ಗದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಇಲಾಖಾ ಮುಖ್ಯ ಎಂಜಿನಿಯರ್ ಸಲ್ಲಿಸಿದ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
Four assistant engineers and a first division assistant with Public Works Department (PWD) were suspended for organising a birthday party after switching off CCTV cameras at the special buildings division of PWD at the Karnataka high court, a designated high-security building.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 05:07 pm
Mangalore Correspondent
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm