ಬ್ರೇಕಿಂಗ್ ನ್ಯೂಸ್
11-04-25 03:45 pm Bangalore Correspondent ಕರ್ನಾಟಕ
ಬೆಂಗಳೂರು, ಎ.11 : ಬೆಂಗಳೂರಿನ ಹೈಕೋರ್ಟ್ ಕಟ್ಟಡದಲ್ಲಿ ಜನ್ಮದಿನದ ನೆಪದಲ್ಲಿ ಮೋಜು - ಮಸ್ತಿ ಮಾಡಿದ ಆರೋಪದಲ್ಲಿ ಐವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹೈಕೋರ್ಟ್ ಕಟ್ಟಡದ ನೆಲಮಾಳಿಗೆಯ ವಿಶೇಷ ಕಟ್ಟಡದಲ್ಲಿ ಸಿಸಿ ಕ್ಯಾಮರಾ ಆಫ್ ಮಾಡಿಕೊಂಡು ಮೋಜು - ಮಸ್ತಿ ಮಾಡಿದ್ದು ಸಹಾಯಕ ಎಂಜಿನಿಯರ್ ಎ.ಟಿ. ಮೀನಾ ಸೇರಿ ನಾಲ್ವರು ಸಿಬ್ಬಂದಿಯನ್ನು ಲೋಕೋಪಯೋಗಿ ಇಲಾಖೆ ಸೇವೆಯಿಂದ ಅಮಾನತು ಮಾಡಿದೆ.
ಜನ್ಮದಿನ ಆಚರಿಸಿಕೊಂಡ ಸಹಾಯಕ ಎಂಜಿನಿಯರ್ ಎ.ಟಿ. ಮೀನಾ ಹಾಗೂ ಆ ಸಂದರ್ಭದಲ್ಲಿ ಅವರ ಜತೆ ಪಾಲ್ಗೊಂಡಿದ್ದ ಸಿಬ್ಬಂದಿ ಸಿಸಿ ಕ್ಯಾಮೆರಾ ಆಫ್ ಮಾಡಿಸಿರುವುದು ಭದ್ರತೆ ಮತ್ತು ಕರ್ತವ್ಯ ಲೋಪ ಎಸಗಿದ ಕೆಲಸವಾಗಿದೆ. ಕಚೇರಿಯ ಘನತೆ ಹಾಗೂ ಗೌರವ ಕಾಪಾಡಿಕೊಳ್ಳುವಲ್ಲಿ ವಿಫಲವಾಗಿದ್ದಾರೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಲೋಕೋಪಯೋಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ಜಿ.ಎಚ್. ಚಿಕ್ಕೇಗೌಡ, ಸಹಾಯಕ ಎಂಜಿನಿಯರ್ಗಳಾದ ಲಾವಣ್ಯ, ನವೀನ್ ಮತ್ತು ಅಮೀನ್ ಎಸ್. ಅನ್ನದಿನ್ನಿ ಸರಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿದ್ದಾರೆ. ಕರ್ನಾಟಕ ರಾಜ್ಯ ನಾಗರಿಕ (ನಡತೆ) ನಿಯಮಗಳು - 2012ರ ನಿಯಮ 3(1) (1ರಿಂದ 4) ಅನ್ನು ಸ್ಪಷ್ಟವಾಗಿ ಉಲ್ಲಂಘಿಸಿರುತ್ತಾರೆ. ಹಾಗಾಗಿ, ಅವರೆಲ್ಲರನ್ನೂ ಅಮಾನತುಗೊಳಿಸಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಸರಕಾರದಿಂದ ಅಧಿಸೂಚಿಸಲ್ಪಟ್ಟ ಪ್ರಮುಖ ಹಾಗೂ ಗಣ್ಯ ವ್ಯಕ್ತಿಗಳ ಜಯಂತಿ ಮತ್ತು ಕಾರ್ಯಕ್ರಮಗಳನ್ನು ಮಾತ್ರ ಸರಕಾರಿ ಕಚೇರಿ ಹಾಗೂ ಆಚರಿಸಲು ಕಾನೂನುಬದ್ಧ ಅವಕಾಶವಿದೆ. ಉಳಿದ ಜಯಂತಿ, ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ಈ ಬಗ್ಗೆ ದೂರಿನ ಕುರಿತಂತೆ ವಿಚಾರಣೆ ನಡೆಸಿದ್ದ ಶಿವಮೊಗ್ಗದ ಸಂಪರ್ಕ ಮತ್ತು ಕಟ್ಟಡ ವಿಭಾಗದ ಇಲಾಖಾ ಮುಖ್ಯ ಎಂಜಿನಿಯರ್ ಸಲ್ಲಿಸಿದ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
Four assistant engineers and a first division assistant with Public Works Department (PWD) were suspended for organising a birthday party after switching off CCTV cameras at the special buildings division of PWD at the Karnataka high court, a designated high-security building.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm