ಬ್ರೇಕಿಂಗ್ ನ್ಯೂಸ್
16-04-25 09:07 pm Bangalore Correspondent ಕರ್ನಾಟಕ
ಬೆಂಗಳೂರು, ಎ.16 : ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸಲು ರಾಜ್ಯ ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕುರಿತು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿರುವ ವರದಿ ಆಧರಿಸಿ ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ.
ರಾಜ್ಯದಲ್ಲಿ ಯಾವುದೇ ಶಾಲೆಗಳಲ್ಲಿ 1ನೇ ತರಗತಿಗೆ ಪ್ರವೇಶ ಪಡೆಯಬೇಕು ಎಂದರೆ ಮಕ್ಕಳಿಗೆ ಕಡ್ಡಾಯವಾಗಿ ಮೇ 31 ರೊಳಗೆ 6 ವರ್ಷ ಪೂರೈಸಿರಬೇಕಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಈ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ಮಕ್ಕಳ ಸೇರ್ಪಡೆಗೆ ವಯಸ್ಸಿನ ಸಡಿಲಿಕೆ ನೀಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಅದರ ಪ್ರಕಾರ, ಮೇ 31ಕ್ಕೆ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಬಹುದಾಗಿದೆ. ಈವರೆಗೆ 1ನೇ ತರಗತಿಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು 6 ವರ್ಷ ಆಗಿರಬೇಕೆನ್ನುವುದು ಕಡ್ಡಾಯವಾಗಿತ್ತು. ಎಲ್ಕೆಜಿ, ಯುಕೆಜಿ ಪೂರೈಸಿದ್ದು ಮಕ್ಕಳಿಗೆ 5 ವರ್ಷ 5 ತಿಂಗಳಾಗಿದ್ದರೆ ಒಂದನೇ ತರಗತಿಗೆ ಪ್ರವೇಶ ನೀಡಲಾಗುವುದು. ಪೋಷಕರ ಒತ್ತಾಯದ ಮೇರೆಗೆ ಈ ಬಾರಿಗೆ ಮಾತ್ರ ವಯೋಮಿತಿ ಸಡಿಲಿಕೆ ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ 2022ರ ನವೆಂಬರ್ನಲ್ಲಿ ಹೊರಡಿಸಿದ ಆದೇಶ ಪ್ರಕಾರ, ಜೂನ್ 1 2025ರ ಒಳಗೆ ಆರು ವರ್ಷಗಳನ್ನು ಪೂರ್ಣಗೊಳಿಸಿದ ಮಕ್ಕಳು 2025-26ನೇ ಶೈಕ್ಷಣಿಕ ವರ್ಷಕ್ಕೆ ಒಂದನೇ ತರಗತಿಗೆ ಪ್ರವೇಶ ಪಡೆಯಲು ಅರ್ಹರಾಗಿದ್ದರು. ಇದರಿಂದ ಸಾವಿರಾರು ಮಕ್ಕಳ ಪ್ರವೇಶಕ್ಕೆ ಅಡ್ಡಿಯಾಗಿತ್ತು. ಮೊದಲು ಇದ್ದಂತೆ ಪೋಷಕರ ಇಚ್ಛೆಗೆ ಅನುಗುಣವಾಗಿ ಶಾಲೆಗೆ ಸೇರಿಸಲು ವಯೋಮಿತಿ ಸಡಿಲಿಕೆಗೆ ಅವಕಾಶ ನೀಡಬೇಕು ಎಂದು ಹಲವು ಪೋಷಕರು ಮನವಿ ಮಾಡಿದ್ದರು.
ಅಂದ್ರೆ 5 ವರ್ಷ 5 ತಿಂಗಳು ಇರುವ ಮಕ್ಕಳಿಗೆ ಈ ವರ್ಷ 1ನೇ ತರಗತಿ ನೋಂದಣಿಗೆ ಅವಕಾಶ ಮಾಡಲಾಗುತ್ತಿದೆ. 1ನೇ ತರಗತಿಯ ಅಡ್ಮಿಷನ್ ಜೊತೆಗೆ LKG ಪ್ರವೇಶ ಪಡೆಯುವ ಮಕ್ಕಳಿಗೆ 4 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್ಇ, ಸಿಬಿಎಸ್ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
The Karnataka government has decided to give exemption from the rule of 'minimum 6 years of age' for admission to class 1 in state schools only for this academic year.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm