ಬ್ರೇಕಿಂಗ್ ನ್ಯೂಸ್
19-12-20 03:48 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.19: ಕೊನೆಗೂ ಶಾಲೆ ಆರಂಭಿಸುವತ್ತ ದಿಟ್ಟ ಹೆಜ್ಜೆ ಇಟ್ಟಿದೆ. ಜನವರಿ 1ರಿಂದಲೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಆರಂಭಿಸಲು ರಾಜ್ಯ ಸರಕಾರ ಹಸಿರು ನಿಶಾನೆ ನೀಡಿದೆ.
ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಪ್ರಮುಖ ಸಚಿವರ ಜೊತೆ ಸಭೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶಾಲೆ ಆರಂಭಿಸಲು ನಿರ್ಧಾರ ತೆಗೆದುಕೊಂಡಿದ್ದಾಗಿ ಪ್ರಕಟಿಸಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಕೊರೊನಾ ಸಲಹಾ ಸಮಿತಿ ರಾಜ್ಯ ಸರಕಾರಕ್ಕೆ ಈ ಬಗ್ಗೆ ವರದಿ ನೀಡಿತ್ತು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಮತ್ತು ಕೊರೊನಾ ಸೋಂಕಿನ ಪ್ರಮಾಣ ತಗ್ಗಿರುವ ಕಾರಣ ಜನವರಿ ಒಂದರಿಂದಲೇ 10 ಮತ್ತು 12ನೇ ತರಗತಿಗಳನ್ನು ಆರಂಭಿಸಲು ಸಲಹೆ ಮಾಡಿತ್ತು. ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡ ಅದಕ್ಕೆ ಒಪ್ಪಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

15 ದಿನಗಳ ನಂತರ 9ನೇ ತರಗತಿ ಮತ್ತು ಮೊದಲ ಪಿಯು ತರಗತಿಗಳನ್ನು ಆರಂಭಿಸಲು ಕೂಡ ಸಲಹಾ ಮಂಡಳಿ ವರದಿಯಲ್ಲಿ ಹೇಳಿದ್ದರು. ಆ ಬಗ್ಗೆ ಮುಖ್ಯಮಂತ್ರಿ ಈಗಲೇ ಯಾವುದೇ ನಿರ್ಧಾರ ಪ್ರಕಟಿಸಿಲ್ಲ.
ಕೊರೊನಾ ಲಾಕ್ಡೌನ್ ಬಳಿಕ ಕಳೆದ 9 ತಿಂಗಳಿಂದ ಶಾಲೆ ಸ್ಥಗಿತಗೊಂಡಿತ್ತು. ಈ ನಡುವೆ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆದಿತ್ತು. ಅದು ಬಿಟ್ಟರೆ ಶಾಲೆ ಸಂಪೂರ್ಣವಾಗಿ ಸ್ಥಗಿತಗೊಂಡು ವಿದ್ಯಾರ್ಥಿಗಳಿಗೂ ಶಿಕ್ಷಣದ ಬಗ್ಗೆ ಆಸಕ್ತಿಯನ್ನೇ ಕಳಕೊಂಡಿದ್ದರು. ಇದೀಗ ಮತ್ತೆ ಶಾಲೆ ಆರಂಭಿಸುವುದರೊಂದಿಗೆ ಕೊರೊನಾ ಬಳಿಕ ವಿದ್ಯಾರ್ಥಿಗಳು ಮತ್ತೆ ಶಾಲೆಯ ಹಾದಿ ಹಿಡಿಯಲಿದ್ದಾರೆ. ಹಾಗಿದ್ದರೂ, ಶಾಲೆಗೆ ಆಗಮಿಸುವುದನ್ನು ಕಡ್ಡಾಯ ಮಾಡುವಂತಿಲ್ಲ ಎಂಬ ಸೂಚನೆಯನ್ನೂ ಶಿಕ್ಷಣ ಇಲಾಖೆ ಶಾಲಾಡಳಿತ ಮಂಡಳಿಗಳಿಗೆ ನೀಡಿದೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm