ಬ್ರೇಕಿಂಗ್ ನ್ಯೂಸ್
21-04-25 07:27 pm Bangalore Correspondent ಕರ್ನಾಟಕ
ಬೆಂಗಳೂರು, ಎ.21: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರೇ ಜಾತಿಗಣತಿ ವರದಿಯ ಮೂಲಪ್ರತಿ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಸರ್ಕಾರ ಈಗ ಮಂಡಿಸುತ್ತಿರುವ ಜಾತಿ ಗಣತಿ ವರದಿಯೇ ನಕಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾದ ದತ್ತಾಂಶಗಳ ವರದಿ ನಕಲಿ ಎಂಬುದಕ್ಕೆ ಪುರಾವೆಯಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆಯವರು 5-10-2021ರಂದು ಸರ್ಕಾರಕ್ಕೆ ಬರದಿದ್ದ ಪತ್ರದ ಪ್ರಕಾರ ಮೂಲ ಅಥವಾ ಹಸ್ತಪ್ರತಿಯೇ ಇಲ್ಲ. ಸೀಲ್ಡ್ ಪೆಟ್ಟಿಗೆಯನ್ನು ಮಹಜರು ಮಾಡಿ ಅಧ್ಯಕ್ಷ, ಸದಸ್ಯರ ಸಮಕ್ಷಮ ತೆರೆದಾಗ ಸೀಲ್ಡ್ ಪೆಟ್ಟಿಗೆಯಲ್ಲಿಟ್ಟಿದ್ದ ಪ್ರತಿಯ ಮೇಲೆ ಸದಸ್ಯ ಕಾರ್ಯದರ್ಶಿ ಸಹಿಯೇ ಇರಲಿಲ್ಲವೆಂಬುದನ್ನು ತಿಳಿಸಿದ್ದಾರೆಂದು ಹೇಳಿದರು.
ಸರ್ಕಾರ ಈಗ ಹೇಳಲಿ. ಈ ಜಾತಿಗಣತಿ ವರದಿ ಅಸಲಿಯೇ? ಮೂಲ ವರದಿಯ ಹಸ್ತಪ್ರತಿಯೇ ಸೀಲ್ಡ್ ಪೆಟ್ಟಿಗೆಯಲ್ಲಿ ಇಲ್ಲ ಎಂದ ಮೇಲೆ ವರದಿ ಹೇಗೆ ವರ್ಜಿನಲ್ ಆಗುತ್ತದೆ? ಇದು ರಕ್ತ ಕಣ್ಣೀರು ಸಿನಿಮಾ ಎಂದು ವ್ಯಂಗ್ಯವಾಡಿದರು. ಮುಖ್ಯಮಂತ್ರಿ ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಜಾತಿಗಣತಿ ವಿಚಾರವನ್ನು ಹೊರಗೆ ತಂದಿದ್ದಾರೆ. ಅವರು ಯಾವಾಗ ಬೇಕೋ ಆಗ ವರದಿ ನೀಡುತ್ತಾರೆ. ಇದಕ್ಕೆ ತಮ್ಮೊಂದಿಗೆ ನಾಟಕ ಕಂಪನಿಯನ್ನು ಇಟ್ಟುಕೊಂಡಿದ್ದಾರೆ ಎಂದು ಟೀಕಿಸಿದರು.
ಆಯೋಗದ ಅಧ್ಯಕ್ಷರೇ ವರದಿಯ ಮೂಲಪ್ರತಿ ಇಲ್ಲ ಎಂದಿದ್ದಾರೆ. ಅವರು ಸಮೀಕ್ಷೆ ಮಾಡಿದ್ದು 6 ಕೋಟಿ ಜನರನ್ನು. ಉಳಿದ ಒಂದು ಕೋಟಿ ಜನರಿಗೆ ನಾಮವೇ? ಎಂದು ಪ್ರಶ್ನಿಸಿದ ಅವರು, ಜಾತಿಗಣತಿಯ ವರ್ಜಿನಲ್ ಪ್ರತಿ ಸಿದ್ದರಾಮಯ್ಯನವರ ಮನೆಯಲ್ಲಿದೆ. ಈಗ ಮಂಡಿಸಿರುವ ವರದಿ ನಕಲಿ ಎಂದು ಆರೋಪಿಸಿದರು.
ಸಮೀಕ್ಷೆ ನಡೆಸಿದ ಮೂಲ ವರದಿ ಪ್ರತಿ ಕಾಣೆಯಾಗಿದ್ದರ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಒಳಪಡಿಸಬೇಕು. ಸಮೀಕ್ಷೆಯ ದಾಖಲೆಗಳು, 165 ಕೋಟಿ ರೂ. ಖರ್ಚು ಮಾಡಿದ್ದು ಹೇಗೆಂಬುದು? ಈ ತನಿಖೆಯ ವ್ಯಾಪ್ತಿಗೆ ತರಬೇಕು. ನಕಲಿ ವರದಿಯನ್ನೇ ಹಲವು ಸಚಿವರು ವೈಜ್ಞಾನಿಕ, ನಿಖರವೆಂದು ಹೇಳಿರುವುದು ಹಾಸ್ಯಾಸ್ಪದವೆಂದು ವ್ಯಂಗ್ಯವಾಡಿದರು.
Terming the present caste census report as “fake” since the original copy is reportedly missing, Leader of Opposition in the Assembly R. Ashok on Sunday demanded a judicial probe into the episode of the original copy missing from the Karnataka State Commission for Backward Classes.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm